Advertisement
ಸುದ್ದಿಗಳು

ದೈಗೋಳಿಯ ಸಾಯಿನಿಕೇತನ ಸೇವಾಶ್ರಮ | ನೂತನ ಪುನರ್ವಸತಿ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ | ಮಾನವ ಸೇವೆಯೇ ಮಾಧವ ಸೇವೆ – ಎಂ ಪದ್ಮನಾಭ ಪೈ |

Share

ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರು ನೀಡಿದ ಸಂದೇಶವನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿ ಅನುಸರಿಸುವ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಲು ಸಾಧ್ಯ ‌ ಎಂದು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ಕರ್ನಾಟಕ ಉತ್ತರದ ರಾಜ್ಯಾಧ್ಯಕ್ಷರಾದ ಎಂ ಪದ್ಮನಾಭ ಪೈ ಅವರು ಹೇಳಿದರು.

ಅವರು ದೈಗೋಳಿಯ ಸಾಯಿನಿಕೇತನ ಸೇವಾಶ್ರಮದ ನೂತನ ಪುನರ್ವಸತಿ ಕೇಂದ್ರ ದ ಕಟ್ಟಡದ ಶಿಲಾನ್ಯಾಸದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶ್ರೀ ಸಾಯಿ ಸೇವಾ ಪ್ರತಿಷ್ಠಾನ ಈ ಆಶ್ರಮದ ಮೂಲಕ ನಡೆಸುತ್ತಿರುವ ನಿಸ್ವಾರ್ಥ ಸೇವೆ ಅತ್ಯಂತ ‌ಶ್ಲಾಘನೀಯ. 250 ಕ್ಕೂ ಮೀರಿದ ನಿರ್ಗತಿಕ ಮಹಿಳೆಯರಿಗೆ ಆಶ್ರಯ ನೀಡುವ ಈ ನೂತನ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ನಾವೆಲ್ಲರೂ ಕೈ ಜೋಡಿಸುವುದರ ಮೂಲಕ ಭಗವಂತನ ಕೃಪಾಶೀರ್ವಾದ ಗಳಿಸೋಣ ಎಂದು ವಿವರಿಸಿದರು.

ವೈದಿಕ ವಿದ್ವಾಂಸರಾದ  ವೇದಮೂರ್ತಿ ಬೋಳಂತಕೋಡಿ ರಾಮಭಟ್ಟರು ಶಿಲಾನ್ಯಾಸವನ್ನು ವೇದೋಕ್ತವಾಗಿ ನಡೆಸಿಕೊಟ್ಟು, ಎಲ್ಲರ ಸಹಕಾರದಿಂದ ಅತಿ ಶೀಘ್ರದಲ್ಲಿ ಈ ಕಟ್ಟಡ ನಿರ್ಮಾಣವಾಗಿ ಲೋಕಾರ್ಪಣೆ ಆಗಲಿ ಎಂದು ಆಶೀರ್ವದಿಸಿದರು.
ವಿಶೇಷ ‌ಆಹ್ವಾನಿತರಾಗಿ ಆಗಮಿಸಿದ ಇನ್ಫೋಸಿಸ್ ನ ಮಂಗಳೂರು ವಿಭಾಗದ ಅಧ್ಯಕ್ಷ  ವಾಸುದೇವ ಕಾಮತ್, ಸೇವಾಶ್ರಮದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ ,ಸಮಾಜದಲ್ಲಿ ‌ಮಾನಸಿಕ ರೋಗಗಳಿಂದ ಬೀದಿಗೆ ಬೀಳಲ್ಪಟ್ಟ ರೋಗಿಗಳನ್ನು ತಂದು ಸಲಹಿ ಗುಣಮುಖರನ್ನಾಗಿಸಿ ಪುನಃ ಮನೆಗೆ‌ ಕಳಿಸುವ ವ್ಯವಸ್ಥೆ ಹೊಂದಿದ ಇಂತಹ ಸಂಸ್ಥೆ ಅತಿ ವಿರಳ. ಈ ಕಾರ್ಯಕ್ಕೆ ನಾವೆಲ್ಲರೂ ಭಾಗಿಗಳಾಗೋಣ ಎಂದರು.

ಕಳೆದ ಕೆಲವು ವರ್ಷಗಳಿಂದ ಆಶ್ರಮದೊಂದಿಗೆ ನಿಕಟ ಸಂಬಂಧ ಹೊಂದಿದ್ದ ಬೆಂಗಳೂರಿನ ಭಟ್‌ ಬಯೋಟೆಕ್ ಕಂಪೆನಿಯ ಸ್ಥಾಪಕ ನಿರ್ದೇಶಕ ಡಾ|ಶಾಮ ಭಟ್ಟರು ತಮ್ಮ ಒಡನಾಟದ ಅನುಭವವನ್ನು ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ತಮ್ಮ ದೇಣಿಗೆಯನ್ನು ಘೋಷಿಸಿದರು.
ಶ್ರೀ ‌ಸತ್ಯಸಾಯಿ ಸೇವಾಸಂಸ್ಥೆಗಳ ಕರ್ನಾಟಕ- ಉತ್ತರದ ಮಹಿಳಾ ಸೇವಾ ಸಂಯೋಜಕಿ  ಪ್ರಿಯಾ ಪಿ ಪೈ, ದ.ಕ. ಜಿಲ್ಲಾಧ್ಯಕ್ಷರಾದ  ಪ್ರಸನ್ನ ಭಟ್ ಬಲ್ನಾಡು, ಕಾಸರಗೋಡು ಜಿಲ್ಲಾಧ್ಯಕ್ಷರಾದ  ಹಿರಣ್ಯ ಮಹಾಲಿಂಗ ಭಟ್ , ಕಾಂಪ್ಕೋದ ನಿರ್ದೇಶಕ ಡಾ ಜಯಪ್ರಕಾಶ್ ನಾರಾಯಣ್ ತೊಟ್ಟೆತ್ತೋಡಿ ವಿಶೇಷ ಅತಿಥಿಗಳಾಗಿದ್ದು ಶುಭಾಶಂಸನೆಗೈದರು.
ಈ ಸಂದರ್ಭದಲ್ಲಿ ಸೇವಾರೂಪದಲ್ಲಿ ನೂತನ ಕಟ್ಟಡದ. ನಕ್ಷೆ ನಿರ್ಮಿಸಿದ ಇಂಜಿನಿಯರ್  ‌ಪೂರ್ಣಿಮಾ ಅವರನ್ನು ಗೌರವಿಸಲಾಯಿತು. ಆಶ್ರಮದ ನಿವಾಸಿ  ‌ರೇಖಾ ಪ್ರಭು ಪ್ರಾರ್ಥನೆ ಮಾಡಿದರು. ಡಾ ಶಾರದಾ ಸ್ವಾಗತಿಸಿ  ಡಾ ಉದಯಕುಮಾರ್ ಪ್ರಾಸ್ತಾವಿಕ ಭಾಷಣ ಮಾಡಿದರು. ಅಮೈ ಸುಬ್ರಹ್ಮಣ್ಯ ಭಟ್ ವಂದನಾರ್ಪಣೆಗೈದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

3 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

3 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

3 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

14 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

15 hours ago