Advertisement
ಸುದ್ದಿಗಳು

ದೈಗೋಳಿಯ ಸಾಯಿನಿಕೇತನ ಸೇವಾಶ್ರಮ | ನೂತನ ಪುನರ್ವಸತಿ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ | ಮಾನವ ಸೇವೆಯೇ ಮಾಧವ ಸೇವೆ – ಎಂ ಪದ್ಮನಾಭ ಪೈ |

Share

ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರು ನೀಡಿದ ಸಂದೇಶವನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿ ಅನುಸರಿಸುವ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಲು ಸಾಧ್ಯ ‌ ಎಂದು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ಕರ್ನಾಟಕ ಉತ್ತರದ ರಾಜ್ಯಾಧ್ಯಕ್ಷರಾದ ಎಂ ಪದ್ಮನಾಭ ಪೈ ಅವರು ಹೇಳಿದರು.

ಅವರು ದೈಗೋಳಿಯ ಸಾಯಿನಿಕೇತನ ಸೇವಾಶ್ರಮದ ನೂತನ ಪುನರ್ವಸತಿ ಕೇಂದ್ರ ದ ಕಟ್ಟಡದ ಶಿಲಾನ್ಯಾಸದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶ್ರೀ ಸಾಯಿ ಸೇವಾ ಪ್ರತಿಷ್ಠಾನ ಈ ಆಶ್ರಮದ ಮೂಲಕ ನಡೆಸುತ್ತಿರುವ ನಿಸ್ವಾರ್ಥ ಸೇವೆ ಅತ್ಯಂತ ‌ಶ್ಲಾಘನೀಯ. 250 ಕ್ಕೂ ಮೀರಿದ ನಿರ್ಗತಿಕ ಮಹಿಳೆಯರಿಗೆ ಆಶ್ರಯ ನೀಡುವ ಈ ನೂತನ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ನಾವೆಲ್ಲರೂ ಕೈ ಜೋಡಿಸುವುದರ ಮೂಲಕ ಭಗವಂತನ ಕೃಪಾಶೀರ್ವಾದ ಗಳಿಸೋಣ ಎಂದು ವಿವರಿಸಿದರು.

ವೈದಿಕ ವಿದ್ವಾಂಸರಾದ  ವೇದಮೂರ್ತಿ ಬೋಳಂತಕೋಡಿ ರಾಮಭಟ್ಟರು ಶಿಲಾನ್ಯಾಸವನ್ನು ವೇದೋಕ್ತವಾಗಿ ನಡೆಸಿಕೊಟ್ಟು, ಎಲ್ಲರ ಸಹಕಾರದಿಂದ ಅತಿ ಶೀಘ್ರದಲ್ಲಿ ಈ ಕಟ್ಟಡ ನಿರ್ಮಾಣವಾಗಿ ಲೋಕಾರ್ಪಣೆ ಆಗಲಿ ಎಂದು ಆಶೀರ್ವದಿಸಿದರು.
ವಿಶೇಷ ‌ಆಹ್ವಾನಿತರಾಗಿ ಆಗಮಿಸಿದ ಇನ್ಫೋಸಿಸ್ ನ ಮಂಗಳೂರು ವಿಭಾಗದ ಅಧ್ಯಕ್ಷ  ವಾಸುದೇವ ಕಾಮತ್, ಸೇವಾಶ್ರಮದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ ,ಸಮಾಜದಲ್ಲಿ ‌ಮಾನಸಿಕ ರೋಗಗಳಿಂದ ಬೀದಿಗೆ ಬೀಳಲ್ಪಟ್ಟ ರೋಗಿಗಳನ್ನು ತಂದು ಸಲಹಿ ಗುಣಮುಖರನ್ನಾಗಿಸಿ ಪುನಃ ಮನೆಗೆ‌ ಕಳಿಸುವ ವ್ಯವಸ್ಥೆ ಹೊಂದಿದ ಇಂತಹ ಸಂಸ್ಥೆ ಅತಿ ವಿರಳ. ಈ ಕಾರ್ಯಕ್ಕೆ ನಾವೆಲ್ಲರೂ ಭಾಗಿಗಳಾಗೋಣ ಎಂದರು.

ಕಳೆದ ಕೆಲವು ವರ್ಷಗಳಿಂದ ಆಶ್ರಮದೊಂದಿಗೆ ನಿಕಟ ಸಂಬಂಧ ಹೊಂದಿದ್ದ ಬೆಂಗಳೂರಿನ ಭಟ್‌ ಬಯೋಟೆಕ್ ಕಂಪೆನಿಯ ಸ್ಥಾಪಕ ನಿರ್ದೇಶಕ ಡಾ|ಶಾಮ ಭಟ್ಟರು ತಮ್ಮ ಒಡನಾಟದ ಅನುಭವವನ್ನು ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ತಮ್ಮ ದೇಣಿಗೆಯನ್ನು ಘೋಷಿಸಿದರು.
ಶ್ರೀ ‌ಸತ್ಯಸಾಯಿ ಸೇವಾಸಂಸ್ಥೆಗಳ ಕರ್ನಾಟಕ- ಉತ್ತರದ ಮಹಿಳಾ ಸೇವಾ ಸಂಯೋಜಕಿ  ಪ್ರಿಯಾ ಪಿ ಪೈ, ದ.ಕ. ಜಿಲ್ಲಾಧ್ಯಕ್ಷರಾದ  ಪ್ರಸನ್ನ ಭಟ್ ಬಲ್ನಾಡು, ಕಾಸರಗೋಡು ಜಿಲ್ಲಾಧ್ಯಕ್ಷರಾದ  ಹಿರಣ್ಯ ಮಹಾಲಿಂಗ ಭಟ್ , ಕಾಂಪ್ಕೋದ ನಿರ್ದೇಶಕ ಡಾ ಜಯಪ್ರಕಾಶ್ ನಾರಾಯಣ್ ತೊಟ್ಟೆತ್ತೋಡಿ ವಿಶೇಷ ಅತಿಥಿಗಳಾಗಿದ್ದು ಶುಭಾಶಂಸನೆಗೈದರು.
ಈ ಸಂದರ್ಭದಲ್ಲಿ ಸೇವಾರೂಪದಲ್ಲಿ ನೂತನ ಕಟ್ಟಡದ. ನಕ್ಷೆ ನಿರ್ಮಿಸಿದ ಇಂಜಿನಿಯರ್  ‌ಪೂರ್ಣಿಮಾ ಅವರನ್ನು ಗೌರವಿಸಲಾಯಿತು. ಆಶ್ರಮದ ನಿವಾಸಿ  ‌ರೇಖಾ ಪ್ರಭು ಪ್ರಾರ್ಥನೆ ಮಾಡಿದರು. ಡಾ ಶಾರದಾ ಸ್ವಾಗತಿಸಿ  ಡಾ ಉದಯಕುಮಾರ್ ಪ್ರಾಸ್ತಾವಿಕ ಭಾಷಣ ಮಾಡಿದರು. ಅಮೈ ಸುಬ್ರಹ್ಮಣ್ಯ ಭಟ್ ವಂದನಾರ್ಪಣೆಗೈದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

5 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

6 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

15 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

15 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

15 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

20 hours ago