ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಸಾವು- ನೋವು | ಇಸ್ರೇಲ್-ಹಮಾಸ್ ಯುದ್ಧದಲ್ಲಿ 5,000ಕ್ಕೂ ಹೆಚ್ಚು ಮಂದಿ ಬಲಿ | ಗಾಜಾಗೆ ನುಗ್ಗಲು ಯಹೂದಿ ಸೇನೆ ರೆಡಿ

October 20, 2023
11:23 PM
ಇಡೀ ವಿಶ್ವವಕ್ಕೆ ಕಂಟಕವಾಗಿರೋ ಇಸ್ರೇಲ್- ಹಮಾಸ್ ಯುದ್ಧ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ದಿನದಿಂದ ದಿನಕ್ಕೆ ದಾವು ನೋವುಗಳು ಸಂಭವಿಸುತ್ತಲೇ ಇದೆ.

ಇಡೀ ವಿಶ್ವವಕ್ಕೆ ಕಂಟಕವಾಗಿರೋ ಇಸ್ರೇಲ್- ಹಮಾಸ್ ಯುದ್ಧ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ದಿನದಿಂದ ದಿನಕ್ಕೆ ದಾವು ನೋವುಗಳು ಸಂಭವಿಸುತ್ತಲೇ ಇದೆ. ಇಸ್ರೇಲ್- ಹಮಾಸ್ ಯುದ್ಧದಲ್ಲಿ (Israel Hamas war) ಈವರೆಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 3,800 ಪ್ಯಾಲೆಸ್ತೀನಿಯರು (Palestinians) ಹಾಗೂ 1,400 ಇಸ್ರೇಲಿಯನ್ನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್-ಹಮಾಸ್ ಕದನ ಪಶ್ಚಿಮ ಏಷ್ಯಾದ ಶಾಂತಿ ಕದಡುವಂತೆ ಕಾಣ್ತಿದೆ. ಇಸ್ರೇಲ್ ಬೆಂಬಲಕ್ಕೆ ನಿಂತ ಅಮೆರಿಕ ವಿರುದ್ಧ ಅರಬ್ ದೇಶಗಳು ಸಿಡಿದೇಳುತ್ತಿವೆ. ಇರಾಕ್‌ನ ಬಾಗ್ದಾದ್‌ನಲ್ಲಿರುವ ಅಮೆರಿಕ ಸೇನಾ ಶಿಬಿರದ ಮೇಲೆ ರಾಕೆಟ್‌ಗಳು ಹಾರಿವೆ.

ಸಿರಿಯಾದ ಆಲ್-ತನ್ಫ್ ಸೇನಾ ನೆಲೆ ಮೇಲೆಯೂ ಡ್ರೋನ್ ದಾಳಿ ನಡೆದಿದೆ. ಯೆಮೆನ್ ತೀರದಿಂದ ಇರಾನ್ ಬೆಂಬಲಿತ ಹುತಿ ಉಗ್ರರು ಇಸ್ರೇಲ್ ಮೇಲೆ ಪ್ರಯೋಗಿಸಿದ ಕ್ಷಿಪಣಿಗಳು ಯುಎಸ್ ಕಾರ್ನಿ ಹೆಸರಿನ ಅಮೆರಿಕ ಯುದ್ಧ ನೌಕೆಯನ್ನು ನಾಶ ಮಾಡಿದೆ. ನಾವು ಎಂತಹದೇ ಸನ್ನಿವೇಶವನ್ನು ಎದುರಿಸಲು ಸಜ್ಜಾಗಿದ್ದೇವೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.

ಈ ಮಧ್ಯೆ, ಬಾಯ್ಕಾಟ್ ಇಸ್ರೇಲ್ ಕ್ಯಾಂಪೇನ್ ಎನ್ನುವ ಪೋಸ್ಟರ್ ಬೆಂಗಳೂರಿನ ಎಲೆಕ್ಟಾçನಿಕ್ ಸಿಟಿಯ ಮಸೀದಿಯೊಂದರ ಗೋಡೆ ಮೇಲೆ ಕಾಣಿಸಿಕೊಂಡಿದೆ. ಆಕ್ರೋಶ ವ್ಯಕ್ತವಾಗುತ್ತಲೇ ಪೋಸ್ಟರ್ ತೆರವು ಮಾಡಲಾಗಿದೆ. ಇನ್ನೂ ಹೈದ್ರಾಬಾದ್‌ನ ಮಸೀದಿಯೊಂದರ ಆವರಣದಲ್ಲಿ ಇಸ್ರೇಲ್-ಅಮೆರಿಕ ಧ್ವಜವನ್ನು ಬರೆದು ಅದರ ಮೇಲೆ ಓಡಾಡುವ ಮೂಲಕ ಮುಸ್ಲಿಮರು ಆಕ್ರೋಶ ಹೊರಹಾಕ್ತಿದ್ದಾರೆ.

– ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror