MIRROR FOCUS

ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಸಾವು- ನೋವು | ಇಸ್ರೇಲ್-ಹಮಾಸ್ ಯುದ್ಧದಲ್ಲಿ 5,000ಕ್ಕೂ ಹೆಚ್ಚು ಮಂದಿ ಬಲಿ | ಗಾಜಾಗೆ ನುಗ್ಗಲು ಯಹೂದಿ ಸೇನೆ ರೆಡಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಡೀ ವಿಶ್ವವಕ್ಕೆ ಕಂಟಕವಾಗಿರೋ ಇಸ್ರೇಲ್- ಹಮಾಸ್ ಯುದ್ಧ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ದಿನದಿಂದ ದಿನಕ್ಕೆ ದಾವು ನೋವುಗಳು ಸಂಭವಿಸುತ್ತಲೇ ಇದೆ. ಇಸ್ರೇಲ್- ಹಮಾಸ್ ಯುದ್ಧದಲ್ಲಿ (Israel Hamas war) ಈವರೆಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 3,800 ಪ್ಯಾಲೆಸ್ತೀನಿಯರು (Palestinians) ಹಾಗೂ 1,400 ಇಸ್ರೇಲಿಯನ್ನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Advertisement
ಇಸ್ರೇಲ್-ಹಮಾಸ್ ಕದನ ಪಶ್ಚಿಮ ಏಷ್ಯಾದ ಶಾಂತಿ ಕದಡುವಂತೆ ಕಾಣ್ತಿದೆ. ಇಸ್ರೇಲ್ ಬೆಂಬಲಕ್ಕೆ ನಿಂತ ಅಮೆರಿಕ ವಿರುದ್ಧ ಅರಬ್ ದೇಶಗಳು ಸಿಡಿದೇಳುತ್ತಿವೆ. ಇರಾಕ್‌ನ ಬಾಗ್ದಾದ್‌ನಲ್ಲಿರುವ ಅಮೆರಿಕ ಸೇನಾ ಶಿಬಿರದ ಮೇಲೆ ರಾಕೆಟ್‌ಗಳು ಹಾರಿವೆ.

ಸಿರಿಯಾದ ಆಲ್-ತನ್ಫ್ ಸೇನಾ ನೆಲೆ ಮೇಲೆಯೂ ಡ್ರೋನ್ ದಾಳಿ ನಡೆದಿದೆ. ಯೆಮೆನ್ ತೀರದಿಂದ ಇರಾನ್ ಬೆಂಬಲಿತ ಹುತಿ ಉಗ್ರರು ಇಸ್ರೇಲ್ ಮೇಲೆ ಪ್ರಯೋಗಿಸಿದ ಕ್ಷಿಪಣಿಗಳು ಯುಎಸ್ ಕಾರ್ನಿ ಹೆಸರಿನ ಅಮೆರಿಕ ಯುದ್ಧ ನೌಕೆಯನ್ನು ನಾಶ ಮಾಡಿದೆ. ನಾವು ಎಂತಹದೇ ಸನ್ನಿವೇಶವನ್ನು ಎದುರಿಸಲು ಸಜ್ಜಾಗಿದ್ದೇವೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.

ಈ ಮಧ್ಯೆ, ಬಾಯ್ಕಾಟ್ ಇಸ್ರೇಲ್ ಕ್ಯಾಂಪೇನ್ ಎನ್ನುವ ಪೋಸ್ಟರ್ ಬೆಂಗಳೂರಿನ ಎಲೆಕ್ಟಾçನಿಕ್ ಸಿಟಿಯ ಮಸೀದಿಯೊಂದರ ಗೋಡೆ ಮೇಲೆ ಕಾಣಿಸಿಕೊಂಡಿದೆ. ಆಕ್ರೋಶ ವ್ಯಕ್ತವಾಗುತ್ತಲೇ ಪೋಸ್ಟರ್ ತೆರವು ಮಾಡಲಾಗಿದೆ. ಇನ್ನೂ ಹೈದ್ರಾಬಾದ್‌ನ ಮಸೀದಿಯೊಂದರ ಆವರಣದಲ್ಲಿ ಇಸ್ರೇಲ್-ಅಮೆರಿಕ ಧ್ವಜವನ್ನು ಬರೆದು ಅದರ ಮೇಲೆ ಓಡಾಡುವ ಮೂಲಕ ಮುಸ್ಲಿಮರು ಆಕ್ರೋಶ ಹೊರಹಾಕ್ತಿದ್ದಾರೆ.

– ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 hour ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

2 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

6 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago