ಇಡೀ ವಿಶ್ವವಕ್ಕೆ ಕಂಟಕವಾಗಿರೋ ಇಸ್ರೇಲ್- ಹಮಾಸ್ ಯುದ್ಧ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ದಿನದಿಂದ ದಿನಕ್ಕೆ ದಾವು ನೋವುಗಳು ಸಂಭವಿಸುತ್ತಲೇ ಇದೆ. ಇಸ್ರೇಲ್- ಹಮಾಸ್ ಯುದ್ಧದಲ್ಲಿ (Israel Hamas war) ಈವರೆಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 3,800 ಪ್ಯಾಲೆಸ್ತೀನಿಯರು (Palestinians) ಹಾಗೂ 1,400 ಇಸ್ರೇಲಿಯನ್ನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಸಿರಿಯಾದ ಆಲ್-ತನ್ಫ್ ಸೇನಾ ನೆಲೆ ಮೇಲೆಯೂ ಡ್ರೋನ್ ದಾಳಿ ನಡೆದಿದೆ. ಯೆಮೆನ್ ತೀರದಿಂದ ಇರಾನ್ ಬೆಂಬಲಿತ ಹುತಿ ಉಗ್ರರು ಇಸ್ರೇಲ್ ಮೇಲೆ ಪ್ರಯೋಗಿಸಿದ ಕ್ಷಿಪಣಿಗಳು ಯುಎಸ್ ಕಾರ್ನಿ ಹೆಸರಿನ ಅಮೆರಿಕ ಯುದ್ಧ ನೌಕೆಯನ್ನು ನಾಶ ಮಾಡಿದೆ. ನಾವು ಎಂತಹದೇ ಸನ್ನಿವೇಶವನ್ನು ಎದುರಿಸಲು ಸಜ್ಜಾಗಿದ್ದೇವೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.
ಈ ಮಧ್ಯೆ, ಬಾಯ್ಕಾಟ್ ಇಸ್ರೇಲ್ ಕ್ಯಾಂಪೇನ್ ಎನ್ನುವ ಪೋಸ್ಟರ್ ಬೆಂಗಳೂರಿನ ಎಲೆಕ್ಟಾçನಿಕ್ ಸಿಟಿಯ ಮಸೀದಿಯೊಂದರ ಗೋಡೆ ಮೇಲೆ ಕಾಣಿಸಿಕೊಂಡಿದೆ. ಆಕ್ರೋಶ ವ್ಯಕ್ತವಾಗುತ್ತಲೇ ಪೋಸ್ಟರ್ ತೆರವು ಮಾಡಲಾಗಿದೆ. ಇನ್ನೂ ಹೈದ್ರಾಬಾದ್ನ ಮಸೀದಿಯೊಂದರ ಆವರಣದಲ್ಲಿ ಇಸ್ರೇಲ್-ಅಮೆರಿಕ ಧ್ವಜವನ್ನು ಬರೆದು ಅದರ ಮೇಲೆ ಓಡಾಡುವ ಮೂಲಕ ಮುಸ್ಲಿಮರು ಆಕ್ರೋಶ ಹೊರಹಾಕ್ತಿದ್ದಾರೆ.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…