Advertisement
MIRROR FOCUS

ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಸಾವು- ನೋವು | ಇಸ್ರೇಲ್-ಹಮಾಸ್ ಯುದ್ಧದಲ್ಲಿ 5,000ಕ್ಕೂ ಹೆಚ್ಚು ಮಂದಿ ಬಲಿ | ಗಾಜಾಗೆ ನುಗ್ಗಲು ಯಹೂದಿ ಸೇನೆ ರೆಡಿ

Share

ಇಡೀ ವಿಶ್ವವಕ್ಕೆ ಕಂಟಕವಾಗಿರೋ ಇಸ್ರೇಲ್- ಹಮಾಸ್ ಯುದ್ಧ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ದಿನದಿಂದ ದಿನಕ್ಕೆ ದಾವು ನೋವುಗಳು ಸಂಭವಿಸುತ್ತಲೇ ಇದೆ. ಇಸ್ರೇಲ್- ಹಮಾಸ್ ಯುದ್ಧದಲ್ಲಿ (Israel Hamas war) ಈವರೆಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 3,800 ಪ್ಯಾಲೆಸ್ತೀನಿಯರು (Palestinians) ಹಾಗೂ 1,400 ಇಸ್ರೇಲಿಯನ್ನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್-ಹಮಾಸ್ ಕದನ ಪಶ್ಚಿಮ ಏಷ್ಯಾದ ಶಾಂತಿ ಕದಡುವಂತೆ ಕಾಣ್ತಿದೆ. ಇಸ್ರೇಲ್ ಬೆಂಬಲಕ್ಕೆ ನಿಂತ ಅಮೆರಿಕ ವಿರುದ್ಧ ಅರಬ್ ದೇಶಗಳು ಸಿಡಿದೇಳುತ್ತಿವೆ. ಇರಾಕ್‌ನ ಬಾಗ್ದಾದ್‌ನಲ್ಲಿರುವ ಅಮೆರಿಕ ಸೇನಾ ಶಿಬಿರದ ಮೇಲೆ ರಾಕೆಟ್‌ಗಳು ಹಾರಿವೆ.

ಸಿರಿಯಾದ ಆಲ್-ತನ್ಫ್ ಸೇನಾ ನೆಲೆ ಮೇಲೆಯೂ ಡ್ರೋನ್ ದಾಳಿ ನಡೆದಿದೆ. ಯೆಮೆನ್ ತೀರದಿಂದ ಇರಾನ್ ಬೆಂಬಲಿತ ಹುತಿ ಉಗ್ರರು ಇಸ್ರೇಲ್ ಮೇಲೆ ಪ್ರಯೋಗಿಸಿದ ಕ್ಷಿಪಣಿಗಳು ಯುಎಸ್ ಕಾರ್ನಿ ಹೆಸರಿನ ಅಮೆರಿಕ ಯುದ್ಧ ನೌಕೆಯನ್ನು ನಾಶ ಮಾಡಿದೆ. ನಾವು ಎಂತಹದೇ ಸನ್ನಿವೇಶವನ್ನು ಎದುರಿಸಲು ಸಜ್ಜಾಗಿದ್ದೇವೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.

ಈ ಮಧ್ಯೆ, ಬಾಯ್ಕಾಟ್ ಇಸ್ರೇಲ್ ಕ್ಯಾಂಪೇನ್ ಎನ್ನುವ ಪೋಸ್ಟರ್ ಬೆಂಗಳೂರಿನ ಎಲೆಕ್ಟಾçನಿಕ್ ಸಿಟಿಯ ಮಸೀದಿಯೊಂದರ ಗೋಡೆ ಮೇಲೆ ಕಾಣಿಸಿಕೊಂಡಿದೆ. ಆಕ್ರೋಶ ವ್ಯಕ್ತವಾಗುತ್ತಲೇ ಪೋಸ್ಟರ್ ತೆರವು ಮಾಡಲಾಗಿದೆ. ಇನ್ನೂ ಹೈದ್ರಾಬಾದ್‌ನ ಮಸೀದಿಯೊಂದರ ಆವರಣದಲ್ಲಿ ಇಸ್ರೇಲ್-ಅಮೆರಿಕ ಧ್ವಜವನ್ನು ಬರೆದು ಅದರ ಮೇಲೆ ಓಡಾಡುವ ಮೂಲಕ ಮುಸ್ಲಿಮರು ಆಕ್ರೋಶ ಹೊರಹಾಕ್ತಿದ್ದಾರೆ.

– ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

4 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

12 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago