Advertisement
ವೆದರ್ ಮಿರರ್

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

Share

4.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡದೊಂದಿಗೆ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಅಧಿಕ ಉಷ್ಣಾಂಶ ಹಾಗೂ ಸೆಕೆ ಮುಂದುವರಿಯಲಿದೆ. ಈಗಿನಂತೆ ಮಾರ್ಚ್ 6 ರಂದು ದ. ಕ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ನಂತರ ಮಾರ್ಚ್ 10 ರ ವರೆಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಗಲು ಮೋಡ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 6 ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಶ್ರೀಲಂಕಾ ದಕ್ಷಿಣ ಕರಾವಳಿಯಲ್ಲಿ ಕಾಣುಸುತ್ತಿರುವ ತಿರುಗುವಿಕೆಯು ಮತ್ತೂ ದಕ್ಷಿಣಕ್ಕೆ ಚಲಿಸಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಯಾವುದೇ ರೀತಿಯ ಪರಿಣಾಮಗಳಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

2 minutes ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

1 hour ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

2 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

15 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

15 hours ago