Advertisement
ಸುದ್ದಿಗಳು

ದ ಕ ಜಿಲ್ಲೆಯಲ್ಲಿ ಅಭಿವೃದ್ಧಿ ಪರವಾದ ಹೆಜ್ಜೆ ಇರಿಸಿದ ಎಎಪಿ |‌ ಅನೇಕ ಪ್ರಮುಖರಿಂದ ಬೆಂಬಲ | ಎಂ ಬಿ ಪುರಾಣಿಕ್ ಎಎಪಿ ಸಭೆಗೆ ಹಾಜರು |

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಆಮ್‌ ಆದ್ಮಿ ಪಕ್ಷ ಅಭಿವೃದ್ಧಿ ನೆಲೆಯಲ್ಲಿ ತನ್ನ ಚಟುವಟಿಕೆ ಆರಂಭಗೊಳಿಸಿದೆ. ಇದೇ ಕಾರಣದಿಂದ ಗಾಂಧಿ ಜಯಂತಿಯಂದು ನಾಗರಿಕ ಕುಂದುಕೊರತೆಗಳ ಪೋರ್ಟಲ್‌ ಅನಾವರಣಗೊಳಿಸಿದೆ. ಜನಪರವಾದ ಕೆಲಸಗಳ ಕಡೆಗೆ ಹೆಜ್ಜೆ ಇರಿಸಿರುವ ದ ಕ ಜಿಲ್ಲೆಯ ಎಎಪಿ ಪರವಾಗಿ ಅನೇಕ ಪ್ರಮುಖರು ಬೆಂಬಲ ವ್ಯಕ್ತಪಡಿಸಿದ್ದಾರೆ. ಒಳ್ಳೆಯ ಕೆಲಸಗಳಿಗೆ ಬೆಂಬಲವಿದೆ ಎಂದು ಹಿಂದೂ ಮುಖಂಡ, ದಕ್ಷಿಣ ಕನ್ನಡ ಜಿಲ್ಲೆಯ ಸಂಘಪರಿವಾರದ ಪ್ರಮುಖರಾದ ಎಂ ಬಿ ಪುರಾಣಿಕ್‌ ಅವರು ನಾಗರಿಕ ಕುಂದುಕೊರತೆಗಳ ಪೋರ್ಟಲ್‌ ಅನಾವರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ಸಮಯಗಳಿಂದ ಕೋಮುಗಲಭೆ ಹಾಗೂ ಕೋಮು ಸೂಕ್ಷ್ಮ ಪ್ರದೇಶಗಳಾಗಿ ರಾಜ್ಯ ಮಾತ್ರವಲ್ಲ ದೇಶದಲ್ಲಿಯೇ ಕಾಣಿಸಿಕೊಂಡಿದೆ. ಅಭಿವೃದ್ಧಿ ಕಾರ್ಯಗಳು ಸಾಕಷ್ಟು ಹಿಂದೆ ಉಳಿದಿದೆ. ಸುಳ್ಯದಿಂದ ತೊಡಗಿ ಮಂಗಳೂರುವರೆಗೆ ಬಹುತೇಕ ವಿಧಾನ ಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿಯಲ್ಲಿ ಹಿನ್ನಡೆ ಕಂಡಿದೆ. ಚುನಾವಣೆಯ ಕೆಲ ಸಮಯಗಳ ಹಿಂದೆ ಕೋಮು ಸೂಕ್ಷ್ಮ ಸಂಗತಿಗಳು ನಡೆದು ಆ ಮೂಲಕ ಜನರಲ್ಲಿ ಮತೀಯ ಹಾಗೂ ಮತೀಯವಾದ ಸಂಚಲನ ಸೃಷ್ಟಿಸಿ ಮತ ಗಳಿಸುವ ತಂತ್ರಗಳು ನಡೆಯುತ್ತಿದೆ. ಹೀಗಾಗಿ ಅಭಿವೃದ್ಧಿ ಕಾರ್ಯಗಳ ಕಡೆಗೂ ಮತದಾರರು ಆದ್ಯತೆ ನೀಡದೇ ಇರುವುದು  ಕಂಡುಬಂದಿದೆ ಎನ್ನುವುದು  ವರದಿ.

Advertisement

ಇದೇ ಕಾರಣದಿಂದ ಸಾಕಷ್ಟು ಪಾದಯಾತ್ರೆ ನಡೆದರೂ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಜನರ ಪ್ರತಿರೋಧ ಇದ್ದರೂ ಎತ್ತಿನಹೊಳೆ ಯೋಜನೆ ಅನುಷ್ಟಾನ ಆಗಿಯೇ ಬಿಟ್ಟಿದೆ. ಅಷ್ಟೂ ಪಾದಯಾತ್ರೆ ಮಾಡಿರುವ ಜನರು ನಂಬಿ ಮೋಸ ಹೋದರು. ಇದೇ ವೇಳೆ ಮಂಗಳೂರು-ಬೆಂಗಳೂರು ಹೆದ್ದಾರಿ, ಮಂಗಳೂರು ನಗರ ಅಭಿವೃದ್ಧಿ, ಟೋಲ್‌ ಸಮಸ್ಯೆ, ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸಮಸ್ಯೆಗಳು ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳ ಕಡೆಗೆ ಇಂದಿಗೂ ಧ್ವನಿಯಾಗುವವರು ಕಡಿಮೆಯಾಗಿದ್ದಾರೆ. ಆದರೆ ಮತೀಯವಾದ ಚರ್ಚೆಗಳು ನಡೆದು ಕೇಸುಗಳಾಗಿ ಅಲೆದು ಉದ್ಯೋಗ, ಆರ್ಥಿಕ ಸಂಕಷ್ಟ ಅನುಭವಿಸಿದವರು ಅನೇಕ ಮಂದಿ ಇದ್ದಾರೆ. ಇಂತಹ ಅನೇಕರು ಈಗ ಎಎಪಿ ಪರವಾದ  ಒಲವು ಹೊಂದಿದ್ದಾರೆ ಎಂದು ಪಕ್ಷದ ಸಮೀಕ್ಷೆ ತಿಳಿಸಿತ್ತು.

Advertisement

ಎಎಪಿಯ ಅಭಿವೃದ್ಧಿ ಪರವಾದ ಚಿಂತನೆಗೆ ಒಲವು ತೋರಿದ ದ ಕ ಜಿಲ್ಲೆಯ ಪ್ರಮುಖರಾದ ವಿಜಯ ವಿಠಲನಾಥ ಶೆಟ್ಟಿ ಸೇರಿದಂತೆ ಹಲವು ಮಂದಿ ಎಎಪಿ ಶಾಲು ಹಾಕಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಹಲವಾರು ಮಂದಿ ಬೆಂಬಲ ವ್ಯಕ್ತಪಡಿಸಿದ್ದರು.

ಸಂತೋಷ್‌ ಕಾಮತ್

ಈಗಾಗಲೇ ಆನ್‌ ಲೈನ್‌ ಮೂಲಕ ನಡೆಸಿದ ಸದಸ್ಯತ್ವ ಅಭಿಯಾನದಲ್ಲಿ ಸಾಕಷ್ಟು ಜನರು ಎಎಪಿ ಪರವಾಗಿ ಒಲವು ಹೊಂದಿದ್ದಾರೆ. ಅಂದರೆ ಅಭಿವೃದ್ಧಿ ಪರವಾದ ಒಲವು ಹೊಂದಿದ್ದರು. ಇದೇ ಕಾರಣಕ್ಕೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ನಾಗರಿಕ ಕುಂದುಕೊರತೆಗಳ ಪೋರ್ಟಲನ್ನು ದಕ್ಷಿಣ ಕನ್ನಡ ಜಿಲ್ಲಾ ಎಎಪಿ ತೆರೆದಿದೆ. ಈ ಮೂಲಕ ಜನರ ಪರವಾಗಿ ಧ್ವನಿ ಎತ್ತಲಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಹೇಳಿದ್ದಾರೆ.

Advertisement

 

ಎಎಪಿಯು ಪ್ರಮುಖವಾಗಿ ಅಭಿವೃದ್ಧಿ ಪರವಾದ ಕೆಲಸಗಳನ್ನು ಮಾಡುತ್ತದೆ. ಅದರ ಜೊತೆಗೆ ಜನರಿಗೆ ಅವಶ್ಯವಾಗಿರುವ ಶಿಕ್ಷಣ, ಆರೋಗ್ಯ, ಭ್ರಷ್ಟಾಚಾರ ನಿರ್ಮೂಲನೆ, ದೇಶ ಪ್ರೇಮ, ಮೂಲಭೂತ ಸೌಕರ್ಯಗಳನ್ನು ಜನರಿಗೆ ಒದಗಿಸಲು ಕೆಲಸ ಮಾಡುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷವಾಗಿ ಕೃಷಿ ಅಭಿವೃದ್ಧಿ ಹಾಗೂ ಕೃಷಿ ಪರವಾದ ಧ್ವನಿಯನ್ನೂ ಎತ್ತಲು ಯೋಜನೆ ರೂಪಿಸಿದೆ. ಇದೆಲ್ಲದರ ಮೊದಲ ಭಾಗವಾಗಿ ಮಂಗಳೂರು ನಗರ ಪಾಲಿಕೆಗೆ ಸೀಮಿತವಾದ ನಾಗರಿಕ ಕುಂದುಕೊರತೆ ಪೋರ್ಟಲ್‌ ರಚನೆ ಮಾಡಲಾಗಿದೆ. ಮುಂದೆ ದ ಕ ಜಿಲ್ಲೆಗೂ ವಿಸ್ತರಿಸಲಾಗುತ್ತದೆ. ದ ಕ ಜಿಲ್ಲೆ ಅಭಿವೃದ್ಧಿ ಹೊಂದಬೇಕು ಎಂಬುದು ನಮ್ಮ ಉದ್ದೇಶ ಎಂದು ಎಎಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ ಹೇಳುತ್ತಾರೆ.

Advertisement

ಆಮ್‌ ಆದ್ಮಿ ಪಕ್ಷವು ಯಾವುದೇ ಜಾತಿ, ಧರ್ಮದ ಪರವಾಗಿ ಕೆಲಸ ಮಾಡುವುದಿಲ್ಲ, ಲಾಬಿಯೂ ಮಾಡುವುದಿಲ್ಲ. ಯಾರೇ, ಯಾವುದೇ ಧರ್ಮದ  ವ್ಯಕ್ತಿಗಳು ತಪ್ಪು ಮಾಡಿದರೆ ತಪ್ಪೇ. ದೇಶದ ವಿರುದ್ಧವಾದ ಯಾವುದೇ ಚಟುವಟಿಕೆ ನಡೆದರೂ ಎಎಪಿ ಖಂಡಿಸುತ್ತದೆ. ದೇಶಾಭಿಮಾನ, ಗ್ರಾಮಾಭಿಮಾನ ಬೆಳೆಸಿಕೊಂಡು ಸಂವಿಧಾನಕ್ಕೆ ಬದ್ಧವಾಗಿ ಸಮಾನತೆಯ ಆಶಯದಂತೆ  ಅಭಿವೃದ್ಧಿ ಕಾರ್ಯಗಳಲ್ಲಿ ಎಎಪಿ ತೊಡಗಿಸಿಕೊಳ್ಳುತ್ತದೆ ಎಂದು ಆಮ್‌ ಆದ್ಮಿ ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯ ಅಶೋಕ್‌ ಎಡಮಲೆ ಹೇಳುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

51 minutes ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 hour ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

17 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

18 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

1 day ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago