ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

May 16, 2026
4:24 PM
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ ಮಳೆಯಾಗುತ್ತಿದೆ. ಕಾಸರಗೋಡು ಗಡಿಭಾಗಗಳಲ್ಲೂ ಗಾಳಿ ಸಹಿತ ಮಳೆ ಚಟುವಟಿಕೆ ಹೆಚ್ಚಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನ ಕೆಲವು ಕಡೆ ಶನಿವಾರ ಬೆಳಗ್ಗೆ ತುಂತುರು ಮಳೆಯಾಗಿತ್ತು.  ಮಧ್ಯಾಹ್ನ ನಂತರ ಹವಾಮಾನದಲ್ಲಿ  ಬದಲಾವಣೆ ಕಂಡುಬಂದಿದ್ದು, ಹಲವೆಡೆ ಸಿಡಿಲು-ಮಿಂಚು ಹಾಗೂ ಗಾಳಿ ಸಹಿತ ಮಳೆಯಾಗುತ್ತಿದೆ. ವಿಶೇಷವಾಗಿ ಮಲೆನಾಡು  ಹೊಂದಿಕೊಂಡ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿ, ಕೆಲವೆಡೆ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿದೆ.

ಮಧ್ಯಾಹ್ನದ ಬಿಸಿಲಿನ ತೀವ್ರತೆ ನಂತರ ವಾತಾವರಣದಲ್ಲಿ ತೇವಾಂಶ ಹೆಚ್ಚಾದ ಪರಿಣಾಮ ಸಂಜೆ ವೇಳೆಗೆ ಗುಡುಗು ಮೋಡಗಳು ವೇಗವಾಗಿ ವೃದ್ಧಿಯಾಗುತ್ತಿವೆ. ಕೆಲ ಭಾಗಗಳಲ್ಲಿ ಗಾಳಿ ಸಹ ಕಂಡುಬಂದಿದೆ ಎಂದು ಕೃಷಿಕರು ಹೇಳಿದ್ದಾರೆ.  ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇನ್ನೊಂದೆಡೆ, ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುತ್ತಿದೆ. ಮೂಡಿಗೆರೆ, ಕೊಪ್ಪ, ಕಳಸ ಸುತ್ತಮುತ್ತ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಕೆಲವು ಪ್ರದೇಶಗಳಲ್ಲಿ ಮಳೆ ಪ್ರಮಾಣ ಸ್ವಲ್ಪ ಹೆಚ್ಚಾಗಿದೆ ಎಂಬ ಮಾಹಿತಿ ಇದೆ.

ಹವಾಮಾನ ವೀಕ್ಷಕರ ಪ್ರಕಾರ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಸಂಜೆ ಹಾಗೂ ರಾತ್ರಿ ವೇಳೆ ಇಂತಹ ಗುಡುಗು ಮಳೆ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದೆ. ಕೆಲವು ಕಡೆ ಸಿಡಿಲು ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಾಗ್ರತೆ ಅಗತ್ಯವಾಗಿದೆ.

Thunderstorm activity has intensified across parts of Coastal and Malnad Karnataka. Moderate rain accompanied by lightning and gusty winds was reported in Sullia, Puttur, Belthangady and Kasaragod border areas of Dakshina Kannada district, while several parts of Chikkamagaluru district also received thunder

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror