ಷೇರು ಮಾರುಕಟ್ಟೆಗೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ ಎಂಟ್ರಿ | ನೀವು ಷೇರು ಖರೀದಿಸಬೇಕೆ..? ಹೀಗೆ ಮಾಡಿ..

March 20, 2024
3:24 PM

ಷೇರು ಮಾರುಕಟ್ಟೆ(Share Marketing) ಏನಿದ್ದರೂ ಬಹುರಾಷ್ಟ್ರೀಯ ಕಂಪೆನಿಗಳಿಗೆ ಮಾತ್ರ, ಅಂತ ಭಾವಿಸಿಕೊಂಡವರು ಅನೇಕರು. ಆದರೆ ಇದನ್ನು ಸುಳ್ಳಾಗಿಸಿದೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ತೆಂಗು ಬೆಳೆಗಾರರು (Coconut Farming) ಮುನ್ನಡೆಸುತ್ತಿರುವ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ. ಈ ಕಂಪನಿ ಸಾರ್ವಜನಿಕರಿಂದ(Publics) ಷೇರು ಸಂಗ್ರಹಕ್ಕೆ ಮುಂದಾಗಿದೆ. ಹೌದು, ತಮ್ಮ ಕಂಪೆನಿಯ(Company) ವಿಸ್ತಾರಕ್ಕೆ ಮುಂದಾಗಿರುವ ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ.

ಯಾಕಾಗಿ ಈ ಯೋಜನೆ? :15 ಸಾವಿರಕ್ಕೂ ಹೆಚ್ಚು ಸದಸ್ಯರು ಇರುವ ಕಂಪನಿ ₹300 ಕೋಟಿ ಮೊತ್ತ ತೊಡಗಿಸಿಕೊಳ್ಳುವ ಯೋಜನೆ ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ₹50 ಕೋಟಿ ಮೌಲ್ಯದ ಷೇರು ಸಂಗ್ರಹಿಸುವ ಗುರಿ ಹೊಂದಿದೆ. ₹ 1 ಸಾವಿರ ಮೌಲ್ಯವನ್ನು ಪ್ರತಿ ಷೇರಿಗೆ ನಿಗದಿ ಮಾಡಲಾಗಿದೆ ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕುಸುಮಾಧರ ಎಸ್.ಕೆ. ತಿಳಿಸಿದ್ದಾರೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ. ಷೇರುದಾರನೊಬ್ಬ ಗರಿಷ್ಠ 200 ಷೇರು ಖರೀದಿಸುವ ಅವಕಾಶವಿದೆ. ಈ ಯೋಜನೆಯ ಮೊದಲ ಹಂತ ಪೂರ್ಣಗೊಂಡಾಗ 300 ಮಂದಿಗೆ ನೇರ ಹಾಗೂ 600ಕ್ಕೂ ಅಧಿಕ ಮಂದಿಗೆ ಪರೋಕ್ಷವಾಗಿ ಉದ್ಯೋಗ ದೊರೆಯಲಿದೆ.

ಹೇಗೆ ಖರೀದಿಸಬಹುದು? : ಹೂಡಿಕೆದಾರರು ಕಂಪನಿಯ ಶಾಖೆಗಳಿಂದ ಷೇರುಗಳನ್ನು ಆನ್‌ಲೈನ್‌ ಮೂಲಕ ಖರೀದಿಸಬಹುದಾಗಿದೆ. ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಮೂಲಕ ಖರೀದಿಗೆ ಅವಕಾಶ ನೀಡಲಾಗಿದೆ. ಇಲ್ಲವೇ, ದೂರವಾಣಿ ಸಂಖ್ಯೆ 8105487763 ಮತ್ತು ಟೋಲ್‌ ಫ್ರೀ ಸಂಖ್ಯೆ 18002030129 ಮೂಲಕ ಕರೆ ಮಾಡಿಯೂ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.

Dakshina Kannada coconut farmer producer company led by coconut farmers of Dakshina Kannada district. This company is going to collect shares from the public. Yes, the board of directors has come to this decision for the expansion of their company.

Source : Prajavani

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ
July 7, 2026
3:44 PM
by: ದ ರೂರಲ್ ಮಿರರ್.ಕಾಂ
ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ
July 7, 2026
12:57 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ
July 7, 2026
12:25 PM
by: ಸಾಯಿಶೇಖರ್ ಕರಿಕಳ
ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ
July 7, 2026
11:57 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror