Advertisement
ಪ್ರಮುಖ

ಷೇರು ಮಾರುಕಟ್ಟೆಗೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ ಎಂಟ್ರಿ | ನೀವು ಷೇರು ಖರೀದಿಸಬೇಕೆ..? ಹೀಗೆ ಮಾಡಿ..

Share

ಷೇರು ಮಾರುಕಟ್ಟೆ(Share Marketing) ಏನಿದ್ದರೂ ಬಹುರಾಷ್ಟ್ರೀಯ ಕಂಪೆನಿಗಳಿಗೆ ಮಾತ್ರ, ಅಂತ ಭಾವಿಸಿಕೊಂಡವರು ಅನೇಕರು. ಆದರೆ ಇದನ್ನು ಸುಳ್ಳಾಗಿಸಿದೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ತೆಂಗು ಬೆಳೆಗಾರರು (Coconut Farming) ಮುನ್ನಡೆಸುತ್ತಿರುವ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ. ಈ ಕಂಪನಿ ಸಾರ್ವಜನಿಕರಿಂದ(Publics) ಷೇರು ಸಂಗ್ರಹಕ್ಕೆ ಮುಂದಾಗಿದೆ. ಹೌದು, ತಮ್ಮ ಕಂಪೆನಿಯ(Company) ವಿಸ್ತಾರಕ್ಕೆ ಮುಂದಾಗಿರುವ ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ.

ಯಾಕಾಗಿ ಈ ಯೋಜನೆ? :15 ಸಾವಿರಕ್ಕೂ ಹೆಚ್ಚು ಸದಸ್ಯರು ಇರುವ ಕಂಪನಿ ₹300 ಕೋಟಿ ಮೊತ್ತ ತೊಡಗಿಸಿಕೊಳ್ಳುವ ಯೋಜನೆ ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ₹50 ಕೋಟಿ ಮೌಲ್ಯದ ಷೇರು ಸಂಗ್ರಹಿಸುವ ಗುರಿ ಹೊಂದಿದೆ. ₹ 1 ಸಾವಿರ ಮೌಲ್ಯವನ್ನು ಪ್ರತಿ ಷೇರಿಗೆ ನಿಗದಿ ಮಾಡಲಾಗಿದೆ ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕುಸುಮಾಧರ ಎಸ್.ಕೆ. ತಿಳಿಸಿದ್ದಾರೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ. ಷೇರುದಾರನೊಬ್ಬ ಗರಿಷ್ಠ 200 ಷೇರು ಖರೀದಿಸುವ ಅವಕಾಶವಿದೆ. ಈ ಯೋಜನೆಯ ಮೊದಲ ಹಂತ ಪೂರ್ಣಗೊಂಡಾಗ 300 ಮಂದಿಗೆ ನೇರ ಹಾಗೂ 600ಕ್ಕೂ ಅಧಿಕ ಮಂದಿಗೆ ಪರೋಕ್ಷವಾಗಿ ಉದ್ಯೋಗ ದೊರೆಯಲಿದೆ.

ಹೇಗೆ ಖರೀದಿಸಬಹುದು? : ಹೂಡಿಕೆದಾರರು ಕಂಪನಿಯ ಶಾಖೆಗಳಿಂದ ಷೇರುಗಳನ್ನು ಆನ್‌ಲೈನ್‌ ಮೂಲಕ ಖರೀದಿಸಬಹುದಾಗಿದೆ. ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಮೂಲಕ ಖರೀದಿಗೆ ಅವಕಾಶ ನೀಡಲಾಗಿದೆ. ಇಲ್ಲವೇ, ದೂರವಾಣಿ ಸಂಖ್ಯೆ 8105487763 ಮತ್ತು ಟೋಲ್‌ ಫ್ರೀ ಸಂಖ್ಯೆ 18002030129 ಮೂಲಕ ಕರೆ ಮಾಡಿಯೂ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.

Dakshina Kannada coconut farmer producer company led by coconut farmers of Dakshina Kannada district. This company is going to collect shares from the public. Yes, the board of directors has come to this decision for the expansion of their company.

Source : Prajavani

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

13 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

16 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

17 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

20 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

20 hours ago