Advertisement
MIRROR FOCUS

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

Share

ಹವಾಮಾನ ವೈಪರೀತ್ಯದಿಂದ ತೋಟಗಾರಿಕೆ ಬೆಳೆಗಳಿಗೆ ಉಂಟಾಗುವ ನಷ್ಟಕ್ಕೆ ಪರಿಹಾರ ಒದಗಿಸುವ ಉದ್ದೇಶದಿಂದ 2026-27ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ಜಾರಿಯಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ.

ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಪಡೆಯದ ರೈತರು ಇಬ್ಬರೂ ನೋಂದಾಯಿಸಿಕೊಳ್ಳಬಹುದು. ಬೆಳೆ ಸಾಲ ಪಡೆದಿರುವ ರೈತರು ತಮ್ಮ ಬೆಳೆ ಸಾಲ ಹೊಂದಿರುವ ಬ್ಯಾಂಕ್‌ನಲ್ಲಿ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಉಳಿತಾಯ ಖಾತೆ ಇರುವ ಬ್ಯಾಂಕ್‌ನಲ್ಲಿ ನೋಂದಣಿ ಮಾಡಿಸಬಹುದು. ಇದರ ಜೊತೆಗೆ ಸಾಮಾನ್ಯ ಸೇವಾ ಕೇಂದ್ರ (CSC) ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿಯೂ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

ಯೋಜನೆಯಡಿ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ ಅಡಿಕೆಗೆ ಪ್ರತಿ ಹೆಕ್ಟೇರಿಗೆ ₹6,400 ಹಾಗೂ ಕಾಳುಮೆಣಸಿಗೆ ಪ್ರತಿ ಹೆಕ್ಟೇರಿಗೆ ₹2,350 ನಿಗದಿಪಡಿಸಲಾಗಿದೆ.

2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೋಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನಾಂಕವಾಗಿದೆ. ರೈತರು ಕೊನೆಯ ಕ್ಷಣದವರೆಗೆ ಕಾಯದೆ ಶೀಘ್ರ ನೋಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆಯುವಂತೆ ತೋಟಗಾರಿಕೆ ಇಲಾಖೆ ಮನವಿ ಮಾಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಟಾಟಾ ಎಐಜಿ ವಿಮಾ ಸಂಸ್ಥೆ ಆಯ್ಕೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿಗೆ ಟಾಟಾ ಎಐಜಿ ಸಂಸ್ಥೆಯನ್ನು ಯೋಜನೆಯ ಅನುಷ್ಠಾನಕ್ಕಾಗಿ ವಿಮಾ ಸಂಸ್ಥೆಯಾಗಿ ಆಯ್ಕೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೈತರು ಸಂಬಂಧಿತ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಜಿಲ್ಲಾ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

The Karnataka Government has opened registration for the Weather-Based Crop Insurance Scheme for the 2026–27 Kharif and Hingaru seasons. In Dakshina Kannada district, arecanut and black pepper have been notified under the scheme. Farmers can register through banks, CSCs, or Grama One centres until July 31, 2026. The farmer premium is ₹6,400 per hectare for arecanut and ₹2,350 per hectare for black pepper.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

3 days ago