ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

March 27, 2026
6:50 AM
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು ಕುಡಿಯುವುದು ಮತ್ತು ಬಿಸಿಲಿನಿಂದ ದೂರವಿರುವಂತೆ ಆರೋಗ್ಯಾಧಿಕಾರಿ ಸಲಹೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಉಷ್ಣಾಂಶವು ಗಣನೀಯವಾಗಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ ತಿಳಿಸಿದ್ದಾರೆ.

ಬಿಸಿಲಿನ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜನತೆ ಸಡಿಲವಾದ ಉಡುಪುಗಳನ್ನು ಧರಿಸುವುದು ಉತ್ತಮ ಎಂದು ಅವರು ಸಲಹೆ ನೀಡಿದ್ದಾರೆ. ಜೊತೆಗೆ ದೇಹದಲ್ಲಿ ನೀರಿನ ಕೊರತೆ ಉಂಟಾಗದಂತೆ ದಿನಪೂರ್ತಿ ಸಾಕಷ್ಟು ನೀರು ಕುಡಿಯಬೇಕು ಎಂದು ಸೂಚಿಸಿದ್ದಾರೆ.

ಬಿಸಿಲಿನಿಂದ ಸಾಧ್ಯವಾದಷ್ಟು ದೂರ ಇರಲು ಪ್ರಯತ್ನಿಸುವುದು, ವಿಶೇಷವಾಗಿ ಮಧ್ಯಾಹ್ನ ಸಮಯದಲ್ಲಿ ಹೊರಗಡೆ ಹೋಗುವುದನ್ನು ತಪ್ಪಿಸುವುದು ಆರೋಗ್ಯದ ದೃಷ್ಟಿಯಿಂದ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.

ಮನೆಯಲ್ಲಿಯೇ ತಯಾರಿಸಿದ ಪಾನೀಯಗಳನ್ನು ಸೇವಿಸುವುದು ಆರೋಗ್ಯಕ್ಕೆ ಹೆಚ್ಚು ಉಪಯುಕ್ತವಾಗಿದ್ದು, ಹೊರಗಿನ ಪಾನೀಯಗಳ ಬಳಕೆಯನ್ನು ಕಡಿಮೆ ಮಾಡುವುದು ಉತ್ತಮ ಎಂದು ಅವರು ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

With rising temperatures in Dakshina Kannada, District Health Officer Dr. H R Thimmayya has advised people to take precautions such as staying hydrated, wearing loose clothing, avoiding direct sun exposure, and consuming homemade drinks for better health.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ
August 12, 2026
6:58 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ
August 11, 2026
9:56 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?
August 11, 2026
9:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror