ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಮಾನವೀಯ ದೃಷ್ಠಿಯಿಂದ 2022 ರ ಸೆ.22 ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿತ್ತು. ಈ ಹಿನ್ನೆಲೆ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಛೇರಿಯ ಪ್ರಾಕೃತಿಕ ವಿಕೋಪ ವಿಭಾಗದದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಇದೀಗ ಹೊಸ ಸರ್ಕಾರ ಬಂದಿದ್ದು ನೂತನ ಅವರನ್ನು ಕೆಲಸದಿಂದ ವಜಾ ಮಾಡಿದೆ.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ ಘಟನೆ ಬಳಿಕ ಕಾರ್ಯಕರ್ತರ ಆಕ್ರೋಶ ಬಿಜೆಪಿ ಮುಖಂಡರ ಕಡೆಗೆ ತಿರುಗಿತ್ತು. ಈ ವೇಳೆ ಘಟನೆಯ ಸಮಗ್ರ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ಏಜೆನ್ಸಿಗೆ ವಹಿಸಿತ್ತು.
ಅಲ್ಲದೆ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.
ಅಲ್ಲದೇ ಪ್ರವೀಣ್ ನೆಟ್ಟಾರ್ ಪತ್ನಿಗೆ ಸರ್ಕಾರದ ವತಿಯಿಂದ ಕೆಲಸ ಕೊಡಬೇಕು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿತ್ತು. ಬಿಜೆಪಿ ಮತ್ತು ಹಿಂದುತ್ವ ಪರ ಕಾರ್ಯಕರ್ತರು ಈ ಬಗ್ಗೆ ಅಭಿಯಾನವನ್ನೂ ನಡೆಸಿದ್ದರು. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿ ಕಚೇರಿಯಲ್ಲೇ ವಿಶೇಷ ನೇಮಕಾತಿ ನಡೆಸಿ 2022ರ ಸೆ.22ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದರು.
ಇದೀಗ ಹೊಸ ಸರ್ಕಾರ ಬಸವರಾಜ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರ್ ಪತ್ನಿ ನೂತನರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…