Advertisement
ಸುದ್ದಿಗಳು

ಹೊಸ ಸರ್ಕಾರ ಅಸ್ವಿತ್ವಕ್ಕೆ ಬಂತು : ಸಂತ್ರಸ್ತನ ಪತ್ನಿಗೆ ಕೆಲಸ ಹೋಯ್ತು : ಪ್ರವೀಣ್‌ ನೆಟ್ಟಾರು ಪತ್ನಿ ನೇಮಕಾತಿ ರದ್ದು

Share

ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ  ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಮಾನವೀಯ ದೃಷ್ಠಿಯಿಂದ 2022 ರ ಸೆ.22 ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿತ್ತು. ಈ ಹಿನ್ನೆಲೆ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಛೇರಿಯ ಪ್ರಾಕೃತಿಕ ವಿಕೋಪ ವಿಭಾಗದದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಇದೀಗ ಹೊಸ ಸರ್ಕಾರ ಬಂದಿದ್ದು ನೂತನ ಅವರನ್ನು ಕೆಲಸದಿಂದ ವಜಾ ಮಾಡಿದೆ.

ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ ಘಟನೆ ಬಳಿಕ ಕಾರ್ಯಕರ್ತರ ಆಕ್ರೋಶ ಬಿಜೆಪಿ ಮುಖಂಡರ ಕಡೆಗೆ ತಿರುಗಿತ್ತು. ಈ ವೇಳೆ ಘಟನೆಯ ಸಮಗ್ರ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ಏಜೆನ್ಸಿಗೆ ವಹಿಸಿತ್ತು.

ಅಲ್ಲದೆ ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್‌ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.

ಅಲ್ಲದೇ ಪ್ರವೀಣ್ ನೆಟ್ಟಾರ್ ಪತ್ನಿಗೆ ಸರ್ಕಾರದ ವತಿಯಿಂದ ಕೆಲಸ ಕೊಡಬೇಕು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿತ್ತು. ಬಿಜೆಪಿ ಮತ್ತು ಹಿಂದುತ್ವ ಪರ ಕಾರ್ಯಕರ್ತರು ಈ ಬಗ್ಗೆ ಅಭಿಯಾನವನ್ನೂ ನಡೆಸಿದ್ದರು. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿ ಕಚೇರಿಯಲ್ಲೇ ವಿಶೇಷ ನೇಮಕಾತಿ ನಡೆಸಿ 2022ರ ಸೆ.22ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದರು.

ಇದೀಗ ಹೊಸ ಸರ್ಕಾರ ಬಸವರಾಜ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರ್ ಪತ್ನಿ ನೂತನರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

6 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

6 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

6 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

7 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago