Advertisement
ಸುದ್ದಿಗಳು

ಹೊಸ ಸರ್ಕಾರ ಅಸ್ವಿತ್ವಕ್ಕೆ ಬಂತು : ಸಂತ್ರಸ್ತನ ಪತ್ನಿಗೆ ಕೆಲಸ ಹೋಯ್ತು : ಪ್ರವೀಣ್‌ ನೆಟ್ಟಾರು ಪತ್ನಿ ನೇಮಕಾತಿ ರದ್ದು

Share

ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ  ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಮಾನವೀಯ ದೃಷ್ಠಿಯಿಂದ 2022 ರ ಸೆ.22 ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿತ್ತು. ಈ ಹಿನ್ನೆಲೆ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಛೇರಿಯ ಪ್ರಾಕೃತಿಕ ವಿಕೋಪ ವಿಭಾಗದದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಇದೀಗ ಹೊಸ ಸರ್ಕಾರ ಬಂದಿದ್ದು ನೂತನ ಅವರನ್ನು ಕೆಲಸದಿಂದ ವಜಾ ಮಾಡಿದೆ.

ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ ಘಟನೆ ಬಳಿಕ ಕಾರ್ಯಕರ್ತರ ಆಕ್ರೋಶ ಬಿಜೆಪಿ ಮುಖಂಡರ ಕಡೆಗೆ ತಿರುಗಿತ್ತು. ಈ ವೇಳೆ ಘಟನೆಯ ಸಮಗ್ರ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ಏಜೆನ್ಸಿಗೆ ವಹಿಸಿತ್ತು.

ಅಲ್ಲದೆ ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್‌ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.

ಅಲ್ಲದೇ ಪ್ರವೀಣ್ ನೆಟ್ಟಾರ್ ಪತ್ನಿಗೆ ಸರ್ಕಾರದ ವತಿಯಿಂದ ಕೆಲಸ ಕೊಡಬೇಕು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿತ್ತು. ಬಿಜೆಪಿ ಮತ್ತು ಹಿಂದುತ್ವ ಪರ ಕಾರ್ಯಕರ್ತರು ಈ ಬಗ್ಗೆ ಅಭಿಯಾನವನ್ನೂ ನಡೆಸಿದ್ದರು. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿ ಕಚೇರಿಯಲ್ಲೇ ವಿಶೇಷ ನೇಮಕಾತಿ ನಡೆಸಿ 2022ರ ಸೆ.22ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದರು.

ಇದೀಗ ಹೊಸ ಸರ್ಕಾರ ಬಸವರಾಜ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರ್ ಪತ್ನಿ ನೂತನರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

8 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

10 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

19 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

23 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

23 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago