ದ ಕ ಜಿಲ್ಲೆಯ ಹೈನುಗಾರರಿಗೆ ಸಿಹಿ ಸುದ್ದಿ | ಲೀಟರ್ ಗೆ 2.05 ರೂಪಾಯಿ ಹೆಚ್ಚುವರಿ ಪ್ರೋತ್ಸಾಹಧನ ಘೋಷಣೆ |

October 8, 2022
10:24 PM

ಅ.11 ರಿಂದ ಅನ್ವಯವಾಗುವಂತೆ ಸಹಕಾರಿ ಸಂಘಗಳ ಮೂಲಕ ಹಾಲು ಒದಗಿಸುವ ಹೈನುಗಾರರಿಗೆ 2.05 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಹೇಳಿದರು.

Advertisement

ದಕ್ಷಿಣ ಕನ್ನಡ ಮತ್ತು ಉಡುಪಿ ವ್ಯಾಪ್ತಿಗಳಲ್ಲಿ ಹಾಲು ಒಕ್ಕೂಟ 732 ಸಹಕಾರಿ ಸಂಘಗಳನ್ನು ಹೊಂದಿದ್ದು, ಪ್ರತಿನಿತ್ಯ 68 ಸಾವಿರ ಹೈನುಗಾರರು ಒಕ್ಕೂಟಕ್ಕೆ ಹಾಲು ನೀಡುತ್ತಿದ್ದಾರೆ. ಹೈನುಗಾರರನ್ನು ಪ್ರೋತ್ಸಾಹಿಸಲು ಹೈನುಗಾರಿಕೆಗೆ ಸದಾ ಬೆನ್ನೆಲುಬಾಗಿ ನಿಂತಿರುವ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವತಿಯಿಂದ ಅ.11 ರಿಂದ ಅನ್ವಯವಾಗುವಂತೆ ಸಹಕಾರಿ ಸಂಘದ ಮೂಲಕ ಹಾಲು ಒದಗಿಸುವ ಹೈನುಗಾರರಿಗೆ 2.05ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಸದ್ಯ ರಾಜ್ಯ ಸರ್ಕಾರಕ್ಕೆ ಪ್ರೋತ್ಸಾಹ ಧನ ಹೆಚ್ಚಿಸುವ ಕುರಿತಾಗಿ ಪ್ರಸ್ತಾವನೆ ಸಲ್ಲಿಸಿದ್ದು, ಅದು ಜಾರಿಯಾಗುವವರೆಗೆ ಈ ಪ್ರೋತ್ಸಾಹ ಧನ ಮುಂದುವರಿಯಲಿದೆ, ಈ ಮೂಲಕ ಹೈನುಗಾರರು ಗುಣಮಟ್ಟದ ಹಾಲು ಸಹಕಾರಿ ಸಂಘಕ್ಕೆ ನೀಡಲು ಅನುವು ಮಾಡಿಕೊಡುವ ಜೊತೆಗೆ ಹಾಲಿನ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡುವ ಉದ್ದೇಶವನ್ನು ಹೊಂದಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ
August 15, 2025
2:23 PM
by: ಸಾಯಿಶೇಖರ್ ಕರಿಕಳ
ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ
August 15, 2025
6:54 AM
by: The Rural Mirror ಸುದ್ದಿಜಾಲ
ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ
August 15, 2025
6:43 AM
by: The Rural Mirror ಸುದ್ದಿಜಾಲ
ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |
August 15, 2025
6:34 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group