ಅ.11 ರಿಂದ ಅನ್ವಯವಾಗುವಂತೆ ಸಹಕಾರಿ ಸಂಘಗಳ ಮೂಲಕ ಹಾಲು ಒದಗಿಸುವ ಹೈನುಗಾರರಿಗೆ 2.05 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಹೇಳಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ವ್ಯಾಪ್ತಿಗಳಲ್ಲಿ ಹಾಲು ಒಕ್ಕೂಟ 732 ಸಹಕಾರಿ ಸಂಘಗಳನ್ನು ಹೊಂದಿದ್ದು, ಪ್ರತಿನಿತ್ಯ 68 ಸಾವಿರ ಹೈನುಗಾರರು ಒಕ್ಕೂಟಕ್ಕೆ ಹಾಲು ನೀಡುತ್ತಿದ್ದಾರೆ. ಹೈನುಗಾರರನ್ನು ಪ್ರೋತ್ಸಾಹಿಸಲು ಹೈನುಗಾರಿಕೆಗೆ ಸದಾ ಬೆನ್ನೆಲುಬಾಗಿ ನಿಂತಿರುವ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವತಿಯಿಂದ ಅ.11 ರಿಂದ ಅನ್ವಯವಾಗುವಂತೆ ಸಹಕಾರಿ ಸಂಘದ ಮೂಲಕ ಹಾಲು ಒದಗಿಸುವ ಹೈನುಗಾರರಿಗೆ 2.05ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಸದ್ಯ ರಾಜ್ಯ ಸರ್ಕಾರಕ್ಕೆ ಪ್ರೋತ್ಸಾಹ ಧನ ಹೆಚ್ಚಿಸುವ ಕುರಿತಾಗಿ ಪ್ರಸ್ತಾವನೆ ಸಲ್ಲಿಸಿದ್ದು, ಅದು ಜಾರಿಯಾಗುವವರೆಗೆ ಈ ಪ್ರೋತ್ಸಾಹ ಧನ ಮುಂದುವರಿಯಲಿದೆ, ಈ ಮೂಲಕ ಹೈನುಗಾರರು ಗುಣಮಟ್ಟದ ಹಾಲು ಸಹಕಾರಿ ಸಂಘಕ್ಕೆ ನೀಡಲು ಅನುವು ಮಾಡಿಕೊಡುವ ಜೊತೆಗೆ ಹಾಲಿನ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡುವ ಉದ್ದೇಶವನ್ನು ಹೊಂದಿದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…