Advertisement
MIRROR FOCUS

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ದಕ  ಜಿ.ಪಂ ಸಿಇಓ ಸೂಚನೆ

Share

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಗ್ರಾಮ ಪಂಚಾಯತ್‍ಗಳು ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾ ಪಂಚಾಯಿತಿ ಸಿಇಒ  ಡಾ. ಆನಂದ್ ಕೆ   ಸೂಚಿಸಿದರು.

ಅವರು ಸೋಮವಾರ ಜಿಲ್ಲಾ  ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ   ಅಧ್ಯಕ್ಷತೆ ವಹಿಸಿ ಮಾತನಾಡಿದರು.  ನೀರು ಸದಾ ಪೂರೈಕೆ ಇರುವಂತೆ  ಗಮನಹರಿಸಬೇಕು. ಅಗತ್ಯ ಬಿದ್ದರೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು   ಅವರು ಸೂಚಿಸಿದರು. ನೀರು ಸರಬರಾಜು ಪೈಪ್‍ಲೈನ್ ಅಳವಡಿಸಲು  ಲೋಕೋಪಯೋಗಿ ರಸ್ತೆಗಳ ಕತ್ತರಿಸುವ ಅಗತ್ಯವಿದ್ದರೆ ಸಂಬಂಧಪಟ್ಟ ಇಲಾಖೆಯು ಸಮನ್ವಯದೊಂದಿಗೆ  ತ್ವರಿತವಾಗಿ ಕಾಮಗಾರಿ ನಡೆಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರು  ಕಾಮಗಾರಿಯಲ್ಲಿ ವಿಳಂಬ ಮಾಡುವುದನ್ನು ಸಹಿಸುವುದಿಲ್ಲ ಎಂದು ಅವರು  ಹೇಳಿದರು. ಗ್ರಾಮ ಪಂಚಾಯತ್‍ಗಳು ಹೊಸ ಬೋರ್‍ವೆಲ್‍ಗಳು ಅಗತ್ಯ ವಿದ್ದರೆ ತಮ್ಮ ಸ್ವಂತ ನಿಧಿಯಿಂದ ಕೊರೆಯಬಹುದಾಗಿದೆ. ಹಾಲಿ ಬೋರ್‍ವೆಲ್‍ಗಳ   ಪುನಶ್ಚೇತನವನ್ನು ಜಿಲ್ಲಾ ಪಂಚಾಯತ್‍ನಿಂದ ಮಾಡಲಾಗುವುದು ಎಂದು  ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು  ತಿಳಿಸಿದರು. ಇದೇ ಸಂದರ್ಭದಲ್ಲಿ ಅವರು  ಜಲಜೀವನ್ ಮಿಷನ್ ಸೇರಿದಂತೆ  ವಿವಿಧ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ  ಜಯಲಕ್ಷ್ಮಿ, ಗ್ರಾಮೀಣ ಕುಡಿಯುವ ನೀರಿನ ಸರಬರಾಜು ಇಂಜಿನಿಯರಿಂಗ್ ಇಲಾಖೆ ಇ.ಇ  ರಘುನಾಥ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ  ಇ.ಇ ವೇಣುಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

5 hours ago

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

2 days ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

3 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

4 days ago