ಹಾವೇರಿ ಜಿಲ್ಲೆಯಲ್ಲಿ ದಾಖಲೆಯ ಮಳೆ | ಹಲವು ಬೆಳೆಗಳಿಗೆ ಸಂಕಷ್ಟ | ಈ ಬಾರಿಯೂ ರೈತರಿಗೆ ನಷ್ಟ |

October 16, 2024
6:52 AM

ಹಾವೇರಿ ಜಿಲ್ಲೆಯಲ್ಲಿ ಏಳು ದಿನಗಳಿಂದ ದಾಖಲೆಯ ಮಳೆ ಸುರಿದಿದ್ದು, ಮಳೆಯಿಂದಾಗಿ ಜಿಲ್ಲೆಯಲ್ಲಿ 146 ಮನೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳ ಜಂಟಿ ತಂಡದಿಂದ ಪರಿಶೀಲನೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ತಿಳಿಸಿದ್ದಾರೆ. ಗೋವಿನಜೋಳ, ಶೇಂಗಾ, ಹತ್ತಿ, ಸೋಯಾಬೀನ್, ಭತ್ತ, ಮೆಣಸಿನಕಾಯಿ, ಸೌತೆಕಾಯಿ, ಟೊಮೆಟೊ ಸೇರಿದಂತೆ ಹಲವು ಬೆಳೆಗಳು ಮಳೆಯಿಂದಾಗಿ ನೆಲಕಚ್ಚಿವೆ. ಒಂದು ಸಾವಿರಕ್ಕೂ ಅಧಿಕ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದ್ದು, ಪರಿಶೀಲನೆ ನಡೆಸಿ ಪರಿಹಾರ ನೀಡಲಾಗುವುದ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

Advertisement

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದ್ದು, ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಮೂಡಿಗೆರೆ, ಆಲ್ದೂರು ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್‌ನಲ್ಲಿ ಮಂಜು ಮುಸುಕಿದ ವಾತಾವರಣವಿದೆ. ವಾಹನ ಸವಾರರು ಈ ಭಾಗಗಳಲ್ಲಿ ಜಾಗರೂಕತೆಯಿಂದ ಚಾಲನೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಕೋಸು, ಟೊಮ್ಯಾಟೊ, ಹೂವು ಬೆಳೆಗಾರರು ಮಳೆಯಿಂದ ಕಂಗಾಲಾಗಿದ್ದಾರೆ.  ಆಲೂಗಡ್ಡೆ ಮತ್ತು ಟೊಮ್ಯಾಟೊ ಬೆಳೆಗೆ ಶೀಲಿಂದ್ರದಿಂದ  ಬರುವ ಅಂಗಮಾರಿ ರೋಗ ಉಲ್ಬಣವಾಗುವ ಸಾಧ್ಯತೆ ಇದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ ಆರೋಪ | ಶಿಕ್ಷಣ ಇಲಾಖೆ ಅಧಿಕಾರಿ ವಿರುದ್ಧ ಪ್ರಕರಣ ದಾಖಲು
April 19, 2025
7:42 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ | ತೋಟಗಾರಿಕಾ ಬೆಳೆ ನಾಶ
April 19, 2025
7:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19-04-2025 | ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ
April 19, 2025
7:20 PM
by: ಸಾಯಿಶೇಖರ್ ಕರಿಕಳ
2026 ರ ವರೆಗೂ ಈ ರಾಶಿಯವರಿಗೆ ರಾಹು ದೆಸೆ….. ಕೈತುಂಬಾ ಹಣ-ಧನ ಸಂಪತ್ತಿನ ಸುರಿಮಳೆ…!
April 19, 2025
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group