ಹಾವೇರಿ ಜಿಲ್ಲೆಯಲ್ಲಿ ಏಳು ದಿನಗಳಿಂದ ದಾಖಲೆಯ ಮಳೆ ಸುರಿದಿದ್ದು, ಮಳೆಯಿಂದಾಗಿ ಜಿಲ್ಲೆಯಲ್ಲಿ 146 ಮನೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳ ಜಂಟಿ ತಂಡದಿಂದ ಪರಿಶೀಲನೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ತಿಳಿಸಿದ್ದಾರೆ. ಗೋವಿನಜೋಳ, ಶೇಂಗಾ, ಹತ್ತಿ, ಸೋಯಾಬೀನ್, ಭತ್ತ, ಮೆಣಸಿನಕಾಯಿ, ಸೌತೆಕಾಯಿ, ಟೊಮೆಟೊ ಸೇರಿದಂತೆ ಹಲವು ಬೆಳೆಗಳು ಮಳೆಯಿಂದಾಗಿ ನೆಲಕಚ್ಚಿವೆ. ಒಂದು ಸಾವಿರಕ್ಕೂ ಅಧಿಕ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದ್ದು, ಪರಿಶೀಲನೆ ನಡೆಸಿ ಪರಿಹಾರ ನೀಡಲಾಗುವುದ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದ್ದು, ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಮೂಡಿಗೆರೆ, ಆಲ್ದೂರು ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ನಲ್ಲಿ ಮಂಜು ಮುಸುಕಿದ ವಾತಾವರಣವಿದೆ. ವಾಹನ ಸವಾರರು ಈ ಭಾಗಗಳಲ್ಲಿ ಜಾಗರೂಕತೆಯಿಂದ ಚಾಲನೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಕೋಸು, ಟೊಮ್ಯಾಟೊ, ಹೂವು ಬೆಳೆಗಾರರು ಮಳೆಯಿಂದ ಕಂಗಾಲಾಗಿದ್ದಾರೆ. ಆಲೂಗಡ್ಡೆ ಮತ್ತು ಟೊಮ್ಯಾಟೊ ಬೆಳೆಗೆ ಶೀಲಿಂದ್ರದಿಂದ ಬರುವ ಅಂಗಮಾರಿ ರೋಗ ಉಲ್ಬಣವಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…