ಹಾವೇರಿ ಜಿಲ್ಲೆಯಲ್ಲಿ ಏಳು ದಿನಗಳಿಂದ ದಾಖಲೆಯ ಮಳೆ ಸುರಿದಿದ್ದು, ಮಳೆಯಿಂದಾಗಿ ಜಿಲ್ಲೆಯಲ್ಲಿ 146 ಮನೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳ ಜಂಟಿ ತಂಡದಿಂದ ಪರಿಶೀಲನೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ತಿಳಿಸಿದ್ದಾರೆ. ಗೋವಿನಜೋಳ, ಶೇಂಗಾ, ಹತ್ತಿ, ಸೋಯಾಬೀನ್, ಭತ್ತ, ಮೆಣಸಿನಕಾಯಿ, ಸೌತೆಕಾಯಿ, ಟೊಮೆಟೊ ಸೇರಿದಂತೆ ಹಲವು ಬೆಳೆಗಳು ಮಳೆಯಿಂದಾಗಿ ನೆಲಕಚ್ಚಿವೆ. ಒಂದು ಸಾವಿರಕ್ಕೂ ಅಧಿಕ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದ್ದು, ಪರಿಶೀಲನೆ ನಡೆಸಿ ಪರಿಹಾರ ನೀಡಲಾಗುವುದ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದ್ದು, ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಮೂಡಿಗೆರೆ, ಆಲ್ದೂರು ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ನಲ್ಲಿ ಮಂಜು ಮುಸುಕಿದ ವಾತಾವರಣವಿದೆ. ವಾಹನ ಸವಾರರು ಈ ಭಾಗಗಳಲ್ಲಿ ಜಾಗರೂಕತೆಯಿಂದ ಚಾಲನೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಕೋಸು, ಟೊಮ್ಯಾಟೊ, ಹೂವು ಬೆಳೆಗಾರರು ಮಳೆಯಿಂದ ಕಂಗಾಲಾಗಿದ್ದಾರೆ. ಆಲೂಗಡ್ಡೆ ಮತ್ತು ಟೊಮ್ಯಾಟೊ ಬೆಳೆಗೆ ಶೀಲಿಂದ್ರದಿಂದ ಬರುವ ಅಂಗಮಾರಿ ರೋಗ ಉಲ್ಬಣವಾಗುವ ಸಾಧ್ಯತೆ ಇದೆ.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…