ಹಾವೇರಿ ಜಿಲ್ಲೆಯಲ್ಲಿ ಏಳು ದಿನಗಳಿಂದ ದಾಖಲೆಯ ಮಳೆ ಸುರಿದಿದ್ದು, ಮಳೆಯಿಂದಾಗಿ ಜಿಲ್ಲೆಯಲ್ಲಿ 146 ಮನೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳ ಜಂಟಿ ತಂಡದಿಂದ ಪರಿಶೀಲನೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ತಿಳಿಸಿದ್ದಾರೆ. ಗೋವಿನಜೋಳ, ಶೇಂಗಾ, ಹತ್ತಿ, ಸೋಯಾಬೀನ್, ಭತ್ತ, ಮೆಣಸಿನಕಾಯಿ, ಸೌತೆಕಾಯಿ, ಟೊಮೆಟೊ ಸೇರಿದಂತೆ ಹಲವು ಬೆಳೆಗಳು ಮಳೆಯಿಂದಾಗಿ ನೆಲಕಚ್ಚಿವೆ. ಒಂದು ಸಾವಿರಕ್ಕೂ ಅಧಿಕ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದ್ದು, ಪರಿಶೀಲನೆ ನಡೆಸಿ ಪರಿಹಾರ ನೀಡಲಾಗುವುದ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದ್ದು, ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಮೂಡಿಗೆರೆ, ಆಲ್ದೂರು ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ನಲ್ಲಿ ಮಂಜು ಮುಸುಕಿದ ವಾತಾವರಣವಿದೆ. ವಾಹನ ಸವಾರರು ಈ ಭಾಗಗಳಲ್ಲಿ ಜಾಗರೂಕತೆಯಿಂದ ಚಾಲನೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಕೋಸು, ಟೊಮ್ಯಾಟೊ, ಹೂವು ಬೆಳೆಗಾರರು ಮಳೆಯಿಂದ ಕಂಗಾಲಾಗಿದ್ದಾರೆ. ಆಲೂಗಡ್ಡೆ ಮತ್ತು ಟೊಮ್ಯಾಟೊ ಬೆಳೆಗೆ ಶೀಲಿಂದ್ರದಿಂದ ಬರುವ ಅಂಗಮಾರಿ ರೋಗ ಉಲ್ಬಣವಾಗುವ ಸಾಧ್ಯತೆ ಇದೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…