ಹಾವೇರಿ ಜಿಲ್ಲೆಯಲ್ಲಿ ಏಳು ದಿನಗಳಿಂದ ದಾಖಲೆಯ ಮಳೆ ಸುರಿದಿದ್ದು, ಮಳೆಯಿಂದಾಗಿ ಜಿಲ್ಲೆಯಲ್ಲಿ 146 ಮನೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳ ಜಂಟಿ ತಂಡದಿಂದ ಪರಿಶೀಲನೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ತಿಳಿಸಿದ್ದಾರೆ. ಗೋವಿನಜೋಳ, ಶೇಂಗಾ, ಹತ್ತಿ, ಸೋಯಾಬೀನ್, ಭತ್ತ, ಮೆಣಸಿನಕಾಯಿ, ಸೌತೆಕಾಯಿ, ಟೊಮೆಟೊ ಸೇರಿದಂತೆ ಹಲವು ಬೆಳೆಗಳು ಮಳೆಯಿಂದಾಗಿ ನೆಲಕಚ್ಚಿವೆ. ಒಂದು ಸಾವಿರಕ್ಕೂ ಅಧಿಕ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದ್ದು, ಪರಿಶೀಲನೆ ನಡೆಸಿ ಪರಿಹಾರ ನೀಡಲಾಗುವುದ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದ್ದು, ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಮೂಡಿಗೆರೆ, ಆಲ್ದೂರು ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ನಲ್ಲಿ ಮಂಜು ಮುಸುಕಿದ ವಾತಾವರಣವಿದೆ. ವಾಹನ ಸವಾರರು ಈ ಭಾಗಗಳಲ್ಲಿ ಜಾಗರೂಕತೆಯಿಂದ ಚಾಲನೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಕೋಸು, ಟೊಮ್ಯಾಟೊ, ಹೂವು ಬೆಳೆಗಾರರು ಮಳೆಯಿಂದ ಕಂಗಾಲಾಗಿದ್ದಾರೆ. ಆಲೂಗಡ್ಡೆ ಮತ್ತು ಟೊಮ್ಯಾಟೊ ಬೆಳೆಗೆ ಶೀಲಿಂದ್ರದಿಂದ ಬರುವ ಅಂಗಮಾರಿ ರೋಗ ಉಲ್ಬಣವಾಗುವ ಸಾಧ್ಯತೆ ಇದೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…