ದಾಮಾಯಣ ಇದು ದಾಮಾಯಣ….!! ಇದೆಂತ ಮಾರ್ರೆ ದಾಮಾಯಣ ಅಂತ ಕೇಳ್ತೀರಾ ? ಇದು ಸುಳ್ಯದ ಹುಡುಗರು ನಟಿಸಿರುವ, ತಂಡ ಮಾಡಿರುವ ಸಿನಿಮಾ. ಬಹುನಿರೀಕ್ಷೆಯ ಸಿನಿಮಾ. ದಕ್ಷಿಣ ಕನ್ನಡ ಸೊಗಡಿನ ಭಾಷೆಯಲ್ಲಿ ಬಂದಿರುವ ಸಿನಿಮಾ. ಪಕ್ಕಾ ಲೋಕಲ್ ಹುಡುಗನ ದೊಡ್ಡ ಕನಸಿನ ಚಿತ್ರ ಇದು.
ಹೌದು, ಸುಳ್ಯದ ಹುಡುಗರ ಒಂದು ಸಿನಿಮಾ ಸೆಟ್ಟೇರಿದೆ. ಕನಸು ಮತ್ತು ವಾಸ್ತವದ ಮೇಲೆ ಇರುವ ಹೊಸ ಸಿನಿಮಾ ಇದೆ ಜುಲೈ 14ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಮಂಗಳೂರಿನಲ್ಲಿ ಆಡಿಯೋ ಲಾಂಚ್ ಆಗಿದೆ.
ಸುಳ್ಯದ ಉತ್ಸಾಹಿ ಯುವಕ, ಯುವಪ್ರತಿಭೆ ಶ್ರೀಮುಖ ಅವರು ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ದಕ್ಷಿಣ ಕನ್ನಡ ಸೊಗಡಿನ ಕನ್ನಡ ಭಾಷೆಯಲ್ಲಿ ಬಂದಿರುವ ಈ ಚಿತ್ರ ಪಕ್ಕ ಲೋಕಲ್ ಹುಡುಗನ ಕಥೆ ಇರುವ ಸಿನಿಮಾವಾಗಿದೆ. ಪಕ್ಕಾ ತಮಾಷೆಯ ಈಗಿನ ಕಾಲಘಟ್ಟಕ್ಕೆ ಸರಿಹೊಂದುವಂತಹ ಚಲನಚಿತ್ರವಾಗಿದೆ.
ಸುಳ್ಯ, ಪುತ್ತೂರು, ಮಂಗಳೂರು ಸುತ್ತಮುತ್ತ 25 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದಾರೆ. ಈ ಚಿತ್ರದಲ್ಲಿ 5 ಹಾಡುಗಳಿದ್ದು ಮಂಗಳೂರಿನಲ್ಲಿ ಹಾಡುಗಳು ಬಿಡುಗಡೆಯಾಗಿದೆ.
ಸೆವೆಂಟಿ ಸೆವೆನ್ ಸ್ಟುಡಿಯೋಸ್ ಮೂಲಕ ರಾಘವೇಂದ್ರ ಕುಡ್ವ ನಿರ್ಮಿಸಿರುವ ಈ ಸಿನಿಮಾಕ್ಕೆ ಸಿದ್ದು ಜಿ.ಎಸ್ ಅವರು ಛಾಯಾಗ್ರಹಣ ಮಾಡಿ, ಕೆ. ಎಂ ಕಾರ್ತಿಕ್ ಅವರ ಸಂಕಲನ, ಕೀರ್ತನ್ ಬಾಳಿಲ ಸಂಗೀತ ನಿರ್ದೇಶನ, ಅಕ್ಷಯ್ ರೇವಂಕರ್ ಅವರು ಸಿನಿಮಾದ ಸಹ ನಿರ್ದೇಶನ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ಕೆಲ್ಸ ಮಾಡಿದ್ದಾರೆ.
ನಾಯಕಿಯಾಗಿ ನಟಿ ಅನಘ ಭಟ್ ಅವರು ನಟಿಸಿದ್ದಾರೆ. ಜುಲೈ 14ಕ್ಕೆ ಬಿಡುಗಡೆ ಆಗಿ ಯಶಸ್ಸು ಪಡೆಯಲಿದೆ ಎನ್ನುವ ವಿಶ್ವಾಸ ಈ ತಂಡದ್ದು.
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…