Advertisement
ಸುದ್ದಿಗಳು

ಉತ್ತರ ಕನ್ನಡದ ದಾಂಡೇಲಿಯಲ್ಲಿ ಹಾರ್ನ್ಬಿಲ್ ಹಬ್ಬ | ಮಕ್ಕಳಿಗೆ ಹಾರ್ನ್ಬಿಲ್ ಜೀವನ ಕ್ರಮ ಕುರಿತು ಜಾಗೃತಿ

Share

ಹಾರ್ನ್ಬಿಲ್ ಪಕ್ಷಿಗಳ ಸಂರಕ್ಷಣೆಗೆ ಸಮಾಜ, ಸಾರ್ವಜನಿಕರು ಹಾಗೂ ಮಾಧ್ಯಮಗಳ ಸಹಭಾಗಿತ್ವ ಅತ್ಯಂತ ಅಗತ್ಯವಾಗಿದೆ. ಅರಣ್ಯ ಇಲಾಖೆ ಮಾತ್ರವಲ್ಲದೆ ಎಲ್ಲರೂ ಕೈಜೋಡಿಸಿ, ಸಮಾಜದಲ್ಲಿ ಪಕ್ಷಿಗಳ ಸಂರಕ್ಷಣೆಯ ಮಹತ್ವವನ್ನು ಮೂಡಿಸಬೇಕಿದೆ ಎಂದು ರಾಜ್ಯ ಅಪರ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕುಮಾರ್ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾರ್ನ್ಬಿಲ್ ಭವನದಲ್ಲಿ ಆಯೋಜಿಸಲಾದ ಹಾರ್ನ್ಬಿಲ್ ಹಕ್ಕಿ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಾಲಾ ಮಕ್ಕಳು ಹಾಗೂ ಸ್ಥಳೀಯ ಸಮುದಾಯಕ್ಕೆ ಹಾರ್ನ್ಬಿಲ್ ಪಕ್ಷಿಗಳ ಜೀವನ ಕ್ರಮ, ವಾಸಸ್ಥಾನ ಮತ್ತು ಸಂರಕ್ಷಣೆಯ ಅಗತ್ಯತೆ ಕುರಿತು ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯ ಎಂದು ತಿಳಿಸಿದರು.

ದೇಶದಲ್ಲಿ ಕಂಡುಬರುವ ಒಂಬತ್ತು ಪ್ರಭೇದದ ಹಾರ್ನ್ಬಿಲ್ ಪಕ್ಷಿಗಳಲ್ಲಿ ನಾಲ್ಕು ಪ್ರಭೇದಗಳು ದಾಂಡೇಲಿ ಹಾಗೂ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಕಂಡುಬರುತ್ತಿರುವುದು ರಾಜ್ಯಕ್ಕೂ ಈ ಪ್ರದೇಶಕ್ಕೂ ಹೆಮ್ಮೆಯ ಸಂಗತಿಯಾಗಿದೆ ಎಂದು ಅವರು ಹೇಳಿದರು. ಈ ಜೈವ ವೈವಿಧ್ಯತೆಯನ್ನು ಉಳಿಸಿಕೊಳ್ಳಲು ನಿರಂತರ ಜಾಗೃತಿ ಕಾರ್ಯಕ್ರಮಗಳು ಅಗತ್ಯವೆಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಹಳಿಯಾಳ ವಿಭಾಗದ ಡಿಎಫ್ಒ ಪ್ರಶಾಂತ್ ಕುಮಾರ್ ಮಾತನಾಡಿ, ನದಿ, ಪರಿಸರ, ಅರಣ್ಯ, ವನ್ಯಜೀವಿ ಹಾಗೂ ಪಕ್ಷಿಗಳ ಸಂರಕ್ಷಣೆಯ ಮಹತ್ವವನ್ನು ಜನರಿಗೆ ತಲುಪಿಸುವುದೇ ಹಾರ್ನ್ಬಿಲ್ ಹಬ್ಬದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಹಾರ್ನ್ಬಿಲ್ ಹಬ್ಬದ ಮೂಲಕ ಮಕ್ಕಳಲ್ಲಿ ಪ್ರಕೃತಿ ಪ್ರೀತಿ ಬೆಳೆಸುವ ಜೊತೆಗೆ, ಭವಿಷ್ಯದಲ್ಲಿ ಪರಿಸರ ಸಂರಕ್ಷಣೆಗೆ ಬದ್ಧ ನಾಗರಿಕರನ್ನು ರೂಪಿಸುವ ಆಶಯವಿದೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

12 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

12 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago