Advertisement
MIRROR FOCUS

ಕಳೆನಾಶಕ ಸಿಂಪಡಣೆಯಿಂದ ಇಬ್ಬರು ಬಲಿ | ಹಲವು ದೇಶಗಳಲ್ಲಿ ಕಳೆನಾಶಕ ಬಳಕೆ ನಿಷೇಧ | ಭಾರತದಲ್ಲೂ ನಿಷೇಧ ಸಾಧ್ಯ ಇದೆಯೇ…?

Share

ಕಳೆನಾಶಕ ಸಿಂಪಡಣೆ ಅಪಾಯಕಾರಿಯಾಗಿ ಕಾಣಿಸತೊಡಗಿದೆ. ಹಾಸನದಲ್ಲಿ  ಯುವಕನೊಬ್ಬ ಅಸ್ವಸ್ಥಗೊಂಡು ಮೃತಪಟ್ಟರೆ, ಕೆಲವು ಸಮಯದ ಹಿಂದೆ  ಕುಮಟಾದಲ್ಲಿ ಉಪವಲಯ ಅರಣ್ಯಾಧಿಕಾರಿಯೊಬ್ಬರು ಬಲಿಯಾಗಿದ್ದರು. ಕಳೆನಾಶಕ ಆರೋಗ್ಯದ ಮೇಲೆ, ಪರಿಸರದ ಮೇಲೆ ಅಪಾಯ ಇದೆ ಎಂದು ಕೆಲವು ದೇಶಗಳು ನಿಷೇಧ ಮಾಡಿದ್ದವು. ಆರೋಗ್ಯದ ಅಪಾಯಗಳನ್ನು ಉಲ್ಲೇಖಿಸಿ ಸಾಮಾನ್ಯ ಕಳೆನಾಶಕ ಗ್ಲೈಫೋಸೇಟ್ ಬಳಕೆಯನ್ನು ಕೇಂದ್ರವು ನಿರ್ಬಂಧಿಸುವ ಬಗ್ಗೆ ಕಳೆದ ವರ್ಷ ಚರ್ಚೆಯಾಗಿತ್ತು.  ತಜ್ಞರು ಈ ಕ್ರಮವನ್ನು ಸ್ವಾಗತಿಸಿದ್ದರು. ಆದರೆ ನಿಯಂತ್ರಿಕ ಔಷಧವಾಗಿ ಬಳಕೆಯಲ್ಲಿದೆ.

ಹಾಸನದಲ್ಲಿ ಕೀರ್ತಿ ಎಂಬ 23 ವರ್ಷದ ಯುವಕ ಸತತ 1 ವಾರ ಶುಂಠಿಗೆ ಕಳೆನಾಶಕ ಸಿಂಪಡಿಸಿದ್ದರು. ಬಳಿಕ ದಿಢೀರನೆ ವಾಂತಿ, ಸುಸ್ತಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾಗಿ 4 ದಿನಗಳ ಬಳಿಕ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ. ರಕ್ತದ ಪರೀಕ್ಷೆ ವೇಳೆ ಕೀರ್ತಿ ದೇಹದಲ್ಲಿ ವಿಷ ಇರೋದು ದೃಢವಾಗಿತ್ತು.

ಹುಬ್ಬಳ್ಳಿಯ ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಉಪ ವಲಯ ಅರಣ್ಯಾಧಿಕಾರಿಯೊಬ್ಬರು ಕೀಟನಾಶಕದ ಅಂಶ ದೇಹಕ್ಕೆ ತಗುಲಿ ಸಾವನ್ನಪ್ಪಿರುವ  ಘಟನೆ ಕೆಲವು ಸಮಯದ ಹಿಂದೆ ನಡೆದಿತ್ತು. ಸಾಗವಾನಿ ಮಡಿಗೆ ಕಳೆನಾಶಕ ಹಾಕುವ ವೇಳೆ ಈ ಘಟನೆ ಸಂಭವಿಸಿತ್ತು.

ಕಳೆದ ಕೆಲವು ವರ್ಷಗಳಿಂದ ಕಳೆನಾಶಕ ಸಿಂಪಡಣೆ ಹಾಗೂ ಆರೋಗ್ಯ, ಪರಿಸರದ ಮೇಲಿನ ಅಪಾಯದ ಬಗ್ಗೆ ಚರ್ಚೆಯಾಗುತ್ತಿತ್ತು. ಕೆಲವು ದೇಶಗಳಲ್ಲಿ ಕಳೆನಾಶಕ ಬಳಕೆ ನಿಷೇಧ ಮಾಡಲಾಗಿದೆ. ಅದರಲ್ಲೂ ಆರೋಗ್ಯದ ಅಪಾಯಗಳನ್ನು ಉಲ್ಲೇಖಿಸಿ ಸಾಮಾನ್ಯ ಕಳೆನಾಶಕ ಗ್ಲೈಫೋಸೇಟ್ ಬಳಕೆಯನ್ನು ನಿಷೇಧ ಮಾಡಲಾಗಿತ್ತು. ಭಾರತದಲ್ಲೂ ನಿಷೇಧದ ಬಗ್ಗೆ ಕಳೆದ ಡಿಸೆಂಬರ್‌ನಲ್ಲಿ ಚರ್ಚೆಯಾಗಿತ್ತು. ಈ ಕ್ರಮವನ್ನು ತಜ್ಞರು ಸ್ವಾಗತಿಸಿದ್ದರು.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು 2022 ರ ಅಕ್ಟೋಬರ್ 21 ರಂದು ಗ್ಲೈಫೋಸೇಟ್, ವ್ಯಾಪಕವಾಗಿ ಬಳಸಲಾಗುವ ಸಸ್ಯನಾಶಕಗಳ ಬಳಕೆಯನ್ನು ನಿರ್ಬಂಧಿಸುವ ಸೂಚನೆಯನ್ನು ನೀಡಿತ್ತು. ಮಾನವರು ಮತ್ತು ಪ್ರಾಣಿಗಳ ಆರೋಗ್ಯದ ಅಪಾಯಗಳನ್ನು ಉಲ್ಲೇಖಿಸಿತ್ತು.

ಸುಮಾರು 35 ದೇಶಗಳು ಗ್ಲೈಫೋಸೇಟ್ ಬಳಕೆಯನ್ನು ನಿರ್ಬಂಧಿಸಿವೆ. ಇವುಗಳಲ್ಲಿ ಶ್ರೀಲಂಕಾ, ನೆದರ್ಲ್ಯಾಂಡ್ಸ್, ಫ್ರಾನ್ಸ್, ಕೊಲಂಬಿಯಾ, ಕೆನಡಾ, ಇಸ್ರೇಲ್ ಮತ್ತು ಅರ್ಜೆಂಟೀನಾ ಸೇರಿವೆ. ಗ್ಲೈಫೋಸೇಟ್‌ನ ಆರೋಗ್ಯದ ಪರಿಣಾಮಗಳು ಕ್ಯಾನ್ಸರ್, ಸಂತಾನೋತ್ಪತ್ತಿ ಮತ್ತು  ಊತ, ಚರ್ಮದ ಸುಡುವಿಕೆ, ಮೂಗಿನ ಅಸ್ವಸ್ಥತೆ, ಅಹಿತಕರ ರುಚಿ ಮತ್ತು ಮಸುಕಾದ ದೃಷ್ಟಿ ಇತ್ಯಾದಿಗಳು ಕಾಣುತ್ತವೆ.

ಈಗ ಭಾರತದಲ್ಲಿ 20ಕ್ಕೂ ಹೆಚ್ಚು ಬೆಳೆಗಳಲ್ಲಿ ಗ್ಲೈಫೋಸೇಟ್ ಬಳಸುತ್ತಿರುವುದು ಕಂಡುಬಂದಿದೆ. ಕಳೆನಾಶಕವನ್ನು ಬಳಸುವವರಲ್ಲಿ ಹೆಚ್ಚಿನವರು  ತರಬೇತಿ ಪಡೆದಿಲ್ಲ ಮತ್ತು ಸೂಕ್ತ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಹೊಂದಿಲ್ಲ ಎಂದು ಅಂದು ವರದಿ ಮಾಡಲಾಗಿತ್ತು. ಇಂದಿಗೂ ನಿಯಂತ್ರಿತ ಔಷಧವಾಗಿ ಸಿಂಪಡಣೆ ಮಾಡಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 hour ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

2 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

6 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

14 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

15 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

16 hours ago