ಸಣ್ಣಕಥೆ | ದಣಿವು

October 18, 2021
8:49 PM

ಉನ್ನತ ಶಿಕ್ಷಣವನ್ನು ಪಡೆದು ಬಹುದೊಡ್ಡ ಹುದ್ದೆಗೇರುವ ಕನಸು ರಾಮನದು.

ಆದರೆ ಮನೆಯಲ್ಲಿ ಕಡು ಬಡತನ.ಬಸ್ಟಾಂಡ್ ಪಕ್ಕದ ಅಂಗಡಿಯಲ್ಲಿ ಮುಂದಿನ ಭವಿಷ್ಯ ಹೇಗೆಂಬ ಚಿಂತೆಯಲ್ಲಿ ಕುಳಿತಿದ್ದ ಸ್ವಾಭಿಮಾನಿ ರಾಮನಿಗೆ ಕಂಡದ್ದು ಮುಂದಿದ್ದ ಕಸದ ತೊಟ್ಟಿಯ ಪಕ್ಕದಲ್ಲಿ ಯಾರೋ ಎಸೆದು ಹೋಗಿದ್ದ ಬೂಟ್ ಪಾಲಿಶ್ ಮಾಡುವ ಬ್ರಶ್ ಹಾಗೂ ಅಳಿದುಳಿದ ಸ್ವಲ್ಪವೇ ಸ್ವಲ್ಪ ಪಾಲಿಶ್ ನ ಡಬ್ಬ.

ಹಿಂದೆ ಮುಂದೆ ಯೋಚಿಸದೆ ಅದನ್ನೆತ್ತಿಕೊಂಡ ರಾಮ…ರಾಮನ ಕೈಯ್ಯಲ್ಲಿದ್ದ ವಸ್ತುಗಳನ್ನು ಕಂಡು ತಮ್ಮ ಬೂಟುಗಳನ್ನು ಅವನತ್ತ ಚಾಚಿದ ಅಂಗಡಿಯ ಮುತ್ತುಸ್ವಾಮಿ ದೀಕ್ಷಿತರು ಅವನ ಕೈಯಲ್ಲಿ ನೂರು ರೂಪಾಯಿಯ ನೋಟೊಂದನ್ನು ಕೊಟ್ಟು ಹೊಸ ಬ್ರಶ್ ಹಾಗೂ ಪಾಲೀಶ್ ಡಬ್ಬ ಖರೀದಿಸುವಂತೆ ಹೇಳಿ ಅಪ್ಯಾಯತೆಯಿಂದ ಅವನ ತಲೆ ಸವರಿದರು.

ಹೊಸ ಪಾಲೀಶ್ ಡಬ್ಬ ಖರೀದಿಸಿದ ರಾಮ ದಣಿವರಿಯದೆ ದುಡಿದ….ಇಂದು……….ಅಂದು ತಾನೇ ಪಾಲೀಶ್ ಮಾಡುತ್ತಿದ್ದ ಅದೆಷ್ಟೋ ಹೆಸರಾಂತ ಕಪೆನಿಗಳ ಬೂಟುಗಳ ಬಹುದೊಡ್ಡ ಶಾಖೆಯನ್ನೇ ತಾನು ಹೊಂದಿದ್ದಾನೆ ರಾಮ. ತಾನು ಅಂದು ಆ ಮಾಸಲು ಬಟ್ಟೆಯಲ್ಲಿ ದಣಿವರಿಯದೆ ಬೂಟು ಪಾಲೀಶ್ ಮಾಡುತ್ತಿರುವ ಚಿತ್ರ ಅವನ ಆಫೀಸಿನ ಗೋಡೆಯನ್ನಲಂಕರಿಸಿದೆ.

ಪಕ್ಕದಲ್ಲೇ ಮುತ್ತುಸ್ವಾಮಿ ದೀಕ್ಷಿತರ ವಾತ್ಸಲ್ಯ ಸೂಸುವ ನಗುಮೊಗದ ಚಿತ್ರವೂ.

 ಭಾರತಿ ಭಟ್ ಪಾಣಾಜೆ ( ಅಧ್ಯಕ್ಷರು ಪಾಣಾಜೆ ಗ್ರಾಮ ಪಂಚಾಯತ್ ), ಪುತ್ತೂರು

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..
August 21, 2026
6:28 AM
by: ಮಹೇಶ್ ಪುಚ್ಚಪ್ಪಾಡಿ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?
August 3, 2026
3:37 PM
by: ಮಹೇಶ್ ಪುಚ್ಚಪ್ಪಾಡಿ
ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?
July 19, 2026
7:52 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror