ಅಂಕಣ

ಸಣ್ಣಕಥೆ | ದಣಿವು

Share

ಉನ್ನತ ಶಿಕ್ಷಣವನ್ನು ಪಡೆದು ಬಹುದೊಡ್ಡ ಹುದ್ದೆಗೇರುವ ಕನಸು ರಾಮನದು.

ಆದರೆ ಮನೆಯಲ್ಲಿ ಕಡು ಬಡತನ.ಬಸ್ಟಾಂಡ್ ಪಕ್ಕದ ಅಂಗಡಿಯಲ್ಲಿ ಮುಂದಿನ ಭವಿಷ್ಯ ಹೇಗೆಂಬ ಚಿಂತೆಯಲ್ಲಿ ಕುಳಿತಿದ್ದ ಸ್ವಾಭಿಮಾನಿ ರಾಮನಿಗೆ ಕಂಡದ್ದು ಮುಂದಿದ್ದ ಕಸದ ತೊಟ್ಟಿಯ ಪಕ್ಕದಲ್ಲಿ ಯಾರೋ ಎಸೆದು ಹೋಗಿದ್ದ ಬೂಟ್ ಪಾಲಿಶ್ ಮಾಡುವ ಬ್ರಶ್ ಹಾಗೂ ಅಳಿದುಳಿದ ಸ್ವಲ್ಪವೇ ಸ್ವಲ್ಪ ಪಾಲಿಶ್ ನ ಡಬ್ಬ.

ಹಿಂದೆ ಮುಂದೆ ಯೋಚಿಸದೆ ಅದನ್ನೆತ್ತಿಕೊಂಡ ರಾಮ…ರಾಮನ ಕೈಯ್ಯಲ್ಲಿದ್ದ ವಸ್ತುಗಳನ್ನು ಕಂಡು ತಮ್ಮ ಬೂಟುಗಳನ್ನು ಅವನತ್ತ ಚಾಚಿದ ಅಂಗಡಿಯ ಮುತ್ತುಸ್ವಾಮಿ ದೀಕ್ಷಿತರು ಅವನ ಕೈಯಲ್ಲಿ ನೂರು ರೂಪಾಯಿಯ ನೋಟೊಂದನ್ನು ಕೊಟ್ಟು ಹೊಸ ಬ್ರಶ್ ಹಾಗೂ ಪಾಲೀಶ್ ಡಬ್ಬ ಖರೀದಿಸುವಂತೆ ಹೇಳಿ ಅಪ್ಯಾಯತೆಯಿಂದ ಅವನ ತಲೆ ಸವರಿದರು.

ಹೊಸ ಪಾಲೀಶ್ ಡಬ್ಬ ಖರೀದಿಸಿದ ರಾಮ ದಣಿವರಿಯದೆ ದುಡಿದ….ಇಂದು……….ಅಂದು ತಾನೇ ಪಾಲೀಶ್ ಮಾಡುತ್ತಿದ್ದ ಅದೆಷ್ಟೋ ಹೆಸರಾಂತ ಕಪೆನಿಗಳ ಬೂಟುಗಳ ಬಹುದೊಡ್ಡ ಶಾಖೆಯನ್ನೇ ತಾನು ಹೊಂದಿದ್ದಾನೆ ರಾಮ. ತಾನು ಅಂದು ಆ ಮಾಸಲು ಬಟ್ಟೆಯಲ್ಲಿ ದಣಿವರಿಯದೆ ಬೂಟು ಪಾಲೀಶ್ ಮಾಡುತ್ತಿರುವ ಚಿತ್ರ ಅವನ ಆಫೀಸಿನ ಗೋಡೆಯನ್ನಲಂಕರಿಸಿದೆ.

ಪಕ್ಕದಲ್ಲೇ ಮುತ್ತುಸ್ವಾಮಿ ದೀಕ್ಷಿತರ ವಾತ್ಸಲ್ಯ ಸೂಸುವ ನಗುಮೊಗದ ಚಿತ್ರವೂ.

 ಭಾರತಿ ಭಟ್ ಪಾಣಾಜೆ ( ಅಧ್ಯಕ್ಷರು ಪಾಣಾಜೆ ಗ್ರಾಮ ಪಂಚಾಯತ್ ), ಪುತ್ತೂರು

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…

14 hours ago

ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?

ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…

19 hours ago

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

22 hours ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

23 hours ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

23 hours ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

23 hours ago