ಉನ್ನತ ಶಿಕ್ಷಣವನ್ನು ಪಡೆದು ಬಹುದೊಡ್ಡ ಹುದ್ದೆಗೇರುವ ಕನಸು ರಾಮನದು.
ಆದರೆ ಮನೆಯಲ್ಲಿ ಕಡು ಬಡತನ.ಬಸ್ಟಾಂಡ್ ಪಕ್ಕದ ಅಂಗಡಿಯಲ್ಲಿ ಮುಂದಿನ ಭವಿಷ್ಯ ಹೇಗೆಂಬ ಚಿಂತೆಯಲ್ಲಿ ಕುಳಿತಿದ್ದ ಸ್ವಾಭಿಮಾನಿ ರಾಮನಿಗೆ ಕಂಡದ್ದು ಮುಂದಿದ್ದ ಕಸದ ತೊಟ್ಟಿಯ ಪಕ್ಕದಲ್ಲಿ ಯಾರೋ ಎಸೆದು ಹೋಗಿದ್ದ ಬೂಟ್ ಪಾಲಿಶ್ ಮಾಡುವ ಬ್ರಶ್ ಹಾಗೂ ಅಳಿದುಳಿದ ಸ್ವಲ್ಪವೇ ಸ್ವಲ್ಪ ಪಾಲಿಶ್ ನ ಡಬ್ಬ.
ಹಿಂದೆ ಮುಂದೆ ಯೋಚಿಸದೆ ಅದನ್ನೆತ್ತಿಕೊಂಡ ರಾಮ…ರಾಮನ ಕೈಯ್ಯಲ್ಲಿದ್ದ ವಸ್ತುಗಳನ್ನು ಕಂಡು ತಮ್ಮ ಬೂಟುಗಳನ್ನು ಅವನತ್ತ ಚಾಚಿದ ಅಂಗಡಿಯ ಮುತ್ತುಸ್ವಾಮಿ ದೀಕ್ಷಿತರು ಅವನ ಕೈಯಲ್ಲಿ ನೂರು ರೂಪಾಯಿಯ ನೋಟೊಂದನ್ನು ಕೊಟ್ಟು ಹೊಸ ಬ್ರಶ್ ಹಾಗೂ ಪಾಲೀಶ್ ಡಬ್ಬ ಖರೀದಿಸುವಂತೆ ಹೇಳಿ ಅಪ್ಯಾಯತೆಯಿಂದ ಅವನ ತಲೆ ಸವರಿದರು.
ಹೊಸ ಪಾಲೀಶ್ ಡಬ್ಬ ಖರೀದಿಸಿದ ರಾಮ ದಣಿವರಿಯದೆ ದುಡಿದ….ಇಂದು……….ಅಂದು ತಾನೇ ಪಾಲೀಶ್ ಮಾಡುತ್ತಿದ್ದ ಅದೆಷ್ಟೋ ಹೆಸರಾಂತ ಕಪೆನಿಗಳ ಬೂಟುಗಳ ಬಹುದೊಡ್ಡ ಶಾಖೆಯನ್ನೇ ತಾನು ಹೊಂದಿದ್ದಾನೆ ರಾಮ. ತಾನು ಅಂದು ಆ ಮಾಸಲು ಬಟ್ಟೆಯಲ್ಲಿ ದಣಿವರಿಯದೆ ಬೂಟು ಪಾಲೀಶ್ ಮಾಡುತ್ತಿರುವ ಚಿತ್ರ ಅವನ ಆಫೀಸಿನ ಗೋಡೆಯನ್ನಲಂಕರಿಸಿದೆ.
ಪಕ್ಕದಲ್ಲೇ ಮುತ್ತುಸ್ವಾಮಿ ದೀಕ್ಷಿತರ ವಾತ್ಸಲ್ಯ ಸೂಸುವ ನಗುಮೊಗದ ಚಿತ್ರವೂ.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…