ಉನ್ನತ ಶಿಕ್ಷಣವನ್ನು ಪಡೆದು ಬಹುದೊಡ್ಡ ಹುದ್ದೆಗೇರುವ ಕನಸು ರಾಮನದು.
ಆದರೆ ಮನೆಯಲ್ಲಿ ಕಡು ಬಡತನ.ಬಸ್ಟಾಂಡ್ ಪಕ್ಕದ ಅಂಗಡಿಯಲ್ಲಿ ಮುಂದಿನ ಭವಿಷ್ಯ ಹೇಗೆಂಬ ಚಿಂತೆಯಲ್ಲಿ ಕುಳಿತಿದ್ದ ಸ್ವಾಭಿಮಾನಿ ರಾಮನಿಗೆ ಕಂಡದ್ದು ಮುಂದಿದ್ದ ಕಸದ ತೊಟ್ಟಿಯ ಪಕ್ಕದಲ್ಲಿ ಯಾರೋ ಎಸೆದು ಹೋಗಿದ್ದ ಬೂಟ್ ಪಾಲಿಶ್ ಮಾಡುವ ಬ್ರಶ್ ಹಾಗೂ ಅಳಿದುಳಿದ ಸ್ವಲ್ಪವೇ ಸ್ವಲ್ಪ ಪಾಲಿಶ್ ನ ಡಬ್ಬ.
ಹಿಂದೆ ಮುಂದೆ ಯೋಚಿಸದೆ ಅದನ್ನೆತ್ತಿಕೊಂಡ ರಾಮ…ರಾಮನ ಕೈಯ್ಯಲ್ಲಿದ್ದ ವಸ್ತುಗಳನ್ನು ಕಂಡು ತಮ್ಮ ಬೂಟುಗಳನ್ನು ಅವನತ್ತ ಚಾಚಿದ ಅಂಗಡಿಯ ಮುತ್ತುಸ್ವಾಮಿ ದೀಕ್ಷಿತರು ಅವನ ಕೈಯಲ್ಲಿ ನೂರು ರೂಪಾಯಿಯ ನೋಟೊಂದನ್ನು ಕೊಟ್ಟು ಹೊಸ ಬ್ರಶ್ ಹಾಗೂ ಪಾಲೀಶ್ ಡಬ್ಬ ಖರೀದಿಸುವಂತೆ ಹೇಳಿ ಅಪ್ಯಾಯತೆಯಿಂದ ಅವನ ತಲೆ ಸವರಿದರು.
ಹೊಸ ಪಾಲೀಶ್ ಡಬ್ಬ ಖರೀದಿಸಿದ ರಾಮ ದಣಿವರಿಯದೆ ದುಡಿದ….ಇಂದು……….ಅಂದು ತಾನೇ ಪಾಲೀಶ್ ಮಾಡುತ್ತಿದ್ದ ಅದೆಷ್ಟೋ ಹೆಸರಾಂತ ಕಪೆನಿಗಳ ಬೂಟುಗಳ ಬಹುದೊಡ್ಡ ಶಾಖೆಯನ್ನೇ ತಾನು ಹೊಂದಿದ್ದಾನೆ ರಾಮ. ತಾನು ಅಂದು ಆ ಮಾಸಲು ಬಟ್ಟೆಯಲ್ಲಿ ದಣಿವರಿಯದೆ ಬೂಟು ಪಾಲೀಶ್ ಮಾಡುತ್ತಿರುವ ಚಿತ್ರ ಅವನ ಆಫೀಸಿನ ಗೋಡೆಯನ್ನಲಂಕರಿಸಿದೆ.
ಪಕ್ಕದಲ್ಲೇ ಮುತ್ತುಸ್ವಾಮಿ ದೀಕ್ಷಿತರ ವಾತ್ಸಲ್ಯ ಸೂಸುವ ನಗುಮೊಗದ ಚಿತ್ರವೂ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…