ಉನ್ನತ ಶಿಕ್ಷಣವನ್ನು ಪಡೆದು ಬಹುದೊಡ್ಡ ಹುದ್ದೆಗೇರುವ ಕನಸು ರಾಮನದು.
ಆದರೆ ಮನೆಯಲ್ಲಿ ಕಡು ಬಡತನ.ಬಸ್ಟಾಂಡ್ ಪಕ್ಕದ ಅಂಗಡಿಯಲ್ಲಿ ಮುಂದಿನ ಭವಿಷ್ಯ ಹೇಗೆಂಬ ಚಿಂತೆಯಲ್ಲಿ ಕುಳಿತಿದ್ದ ಸ್ವಾಭಿಮಾನಿ ರಾಮನಿಗೆ ಕಂಡದ್ದು ಮುಂದಿದ್ದ ಕಸದ ತೊಟ್ಟಿಯ ಪಕ್ಕದಲ್ಲಿ ಯಾರೋ ಎಸೆದು ಹೋಗಿದ್ದ ಬೂಟ್ ಪಾಲಿಶ್ ಮಾಡುವ ಬ್ರಶ್ ಹಾಗೂ ಅಳಿದುಳಿದ ಸ್ವಲ್ಪವೇ ಸ್ವಲ್ಪ ಪಾಲಿಶ್ ನ ಡಬ್ಬ.
ಹಿಂದೆ ಮುಂದೆ ಯೋಚಿಸದೆ ಅದನ್ನೆತ್ತಿಕೊಂಡ ರಾಮ…ರಾಮನ ಕೈಯ್ಯಲ್ಲಿದ್ದ ವಸ್ತುಗಳನ್ನು ಕಂಡು ತಮ್ಮ ಬೂಟುಗಳನ್ನು ಅವನತ್ತ ಚಾಚಿದ ಅಂಗಡಿಯ ಮುತ್ತುಸ್ವಾಮಿ ದೀಕ್ಷಿತರು ಅವನ ಕೈಯಲ್ಲಿ ನೂರು ರೂಪಾಯಿಯ ನೋಟೊಂದನ್ನು ಕೊಟ್ಟು ಹೊಸ ಬ್ರಶ್ ಹಾಗೂ ಪಾಲೀಶ್ ಡಬ್ಬ ಖರೀದಿಸುವಂತೆ ಹೇಳಿ ಅಪ್ಯಾಯತೆಯಿಂದ ಅವನ ತಲೆ ಸವರಿದರು.
ಹೊಸ ಪಾಲೀಶ್ ಡಬ್ಬ ಖರೀದಿಸಿದ ರಾಮ ದಣಿವರಿಯದೆ ದುಡಿದ….ಇಂದು……….ಅಂದು ತಾನೇ ಪಾಲೀಶ್ ಮಾಡುತ್ತಿದ್ದ ಅದೆಷ್ಟೋ ಹೆಸರಾಂತ ಕಪೆನಿಗಳ ಬೂಟುಗಳ ಬಹುದೊಡ್ಡ ಶಾಖೆಯನ್ನೇ ತಾನು ಹೊಂದಿದ್ದಾನೆ ರಾಮ. ತಾನು ಅಂದು ಆ ಮಾಸಲು ಬಟ್ಟೆಯಲ್ಲಿ ದಣಿವರಿಯದೆ ಬೂಟು ಪಾಲೀಶ್ ಮಾಡುತ್ತಿರುವ ಚಿತ್ರ ಅವನ ಆಫೀಸಿನ ಗೋಡೆಯನ್ನಲಂಕರಿಸಿದೆ.
ಪಕ್ಕದಲ್ಲೇ ಮುತ್ತುಸ್ವಾಮಿ ದೀಕ್ಷಿತರ ವಾತ್ಸಲ್ಯ ಸೂಸುವ ನಗುಮೊಗದ ಚಿತ್ರವೂ.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…