ಉನ್ನತ ಶಿಕ್ಷಣವನ್ನು ಪಡೆದು ಬಹುದೊಡ್ಡ ಹುದ್ದೆಗೇರುವ ಕನಸು ರಾಮನದು.
ಆದರೆ ಮನೆಯಲ್ಲಿ ಕಡು ಬಡತನ.ಬಸ್ಟಾಂಡ್ ಪಕ್ಕದ ಅಂಗಡಿಯಲ್ಲಿ ಮುಂದಿನ ಭವಿಷ್ಯ ಹೇಗೆಂಬ ಚಿಂತೆಯಲ್ಲಿ ಕುಳಿತಿದ್ದ ಸ್ವಾಭಿಮಾನಿ ರಾಮನಿಗೆ ಕಂಡದ್ದು ಮುಂದಿದ್ದ ಕಸದ ತೊಟ್ಟಿಯ ಪಕ್ಕದಲ್ಲಿ ಯಾರೋ ಎಸೆದು ಹೋಗಿದ್ದ ಬೂಟ್ ಪಾಲಿಶ್ ಮಾಡುವ ಬ್ರಶ್ ಹಾಗೂ ಅಳಿದುಳಿದ ಸ್ವಲ್ಪವೇ ಸ್ವಲ್ಪ ಪಾಲಿಶ್ ನ ಡಬ್ಬ.
ಹಿಂದೆ ಮುಂದೆ ಯೋಚಿಸದೆ ಅದನ್ನೆತ್ತಿಕೊಂಡ ರಾಮ…ರಾಮನ ಕೈಯ್ಯಲ್ಲಿದ್ದ ವಸ್ತುಗಳನ್ನು ಕಂಡು ತಮ್ಮ ಬೂಟುಗಳನ್ನು ಅವನತ್ತ ಚಾಚಿದ ಅಂಗಡಿಯ ಮುತ್ತುಸ್ವಾಮಿ ದೀಕ್ಷಿತರು ಅವನ ಕೈಯಲ್ಲಿ ನೂರು ರೂಪಾಯಿಯ ನೋಟೊಂದನ್ನು ಕೊಟ್ಟು ಹೊಸ ಬ್ರಶ್ ಹಾಗೂ ಪಾಲೀಶ್ ಡಬ್ಬ ಖರೀದಿಸುವಂತೆ ಹೇಳಿ ಅಪ್ಯಾಯತೆಯಿಂದ ಅವನ ತಲೆ ಸವರಿದರು.
ಹೊಸ ಪಾಲೀಶ್ ಡಬ್ಬ ಖರೀದಿಸಿದ ರಾಮ ದಣಿವರಿಯದೆ ದುಡಿದ….ಇಂದು……….ಅಂದು ತಾನೇ ಪಾಲೀಶ್ ಮಾಡುತ್ತಿದ್ದ ಅದೆಷ್ಟೋ ಹೆಸರಾಂತ ಕಪೆನಿಗಳ ಬೂಟುಗಳ ಬಹುದೊಡ್ಡ ಶಾಖೆಯನ್ನೇ ತಾನು ಹೊಂದಿದ್ದಾನೆ ರಾಮ. ತಾನು ಅಂದು ಆ ಮಾಸಲು ಬಟ್ಟೆಯಲ್ಲಿ ದಣಿವರಿಯದೆ ಬೂಟು ಪಾಲೀಶ್ ಮಾಡುತ್ತಿರುವ ಚಿತ್ರ ಅವನ ಆಫೀಸಿನ ಗೋಡೆಯನ್ನಲಂಕರಿಸಿದೆ.
ಪಕ್ಕದಲ್ಲೇ ಮುತ್ತುಸ್ವಾಮಿ ದೀಕ್ಷಿತರ ವಾತ್ಸಲ್ಯ ಸೂಸುವ ನಗುಮೊಗದ ಚಿತ್ರವೂ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…