ಉನ್ನತ ಶಿಕ್ಷಣವನ್ನು ಪಡೆದು ಬಹುದೊಡ್ಡ ಹುದ್ದೆಗೇರುವ ಕನಸು ರಾಮನದು.
ಆದರೆ ಮನೆಯಲ್ಲಿ ಕಡು ಬಡತನ.ಬಸ್ಟಾಂಡ್ ಪಕ್ಕದ ಅಂಗಡಿಯಲ್ಲಿ ಮುಂದಿನ ಭವಿಷ್ಯ ಹೇಗೆಂಬ ಚಿಂತೆಯಲ್ಲಿ ಕುಳಿತಿದ್ದ ಸ್ವಾಭಿಮಾನಿ ರಾಮನಿಗೆ ಕಂಡದ್ದು ಮುಂದಿದ್ದ ಕಸದ ತೊಟ್ಟಿಯ ಪಕ್ಕದಲ್ಲಿ ಯಾರೋ ಎಸೆದು ಹೋಗಿದ್ದ ಬೂಟ್ ಪಾಲಿಶ್ ಮಾಡುವ ಬ್ರಶ್ ಹಾಗೂ ಅಳಿದುಳಿದ ಸ್ವಲ್ಪವೇ ಸ್ವಲ್ಪ ಪಾಲಿಶ್ ನ ಡಬ್ಬ.
ಹಿಂದೆ ಮುಂದೆ ಯೋಚಿಸದೆ ಅದನ್ನೆತ್ತಿಕೊಂಡ ರಾಮ…ರಾಮನ ಕೈಯ್ಯಲ್ಲಿದ್ದ ವಸ್ತುಗಳನ್ನು ಕಂಡು ತಮ್ಮ ಬೂಟುಗಳನ್ನು ಅವನತ್ತ ಚಾಚಿದ ಅಂಗಡಿಯ ಮುತ್ತುಸ್ವಾಮಿ ದೀಕ್ಷಿತರು ಅವನ ಕೈಯಲ್ಲಿ ನೂರು ರೂಪಾಯಿಯ ನೋಟೊಂದನ್ನು ಕೊಟ್ಟು ಹೊಸ ಬ್ರಶ್ ಹಾಗೂ ಪಾಲೀಶ್ ಡಬ್ಬ ಖರೀದಿಸುವಂತೆ ಹೇಳಿ ಅಪ್ಯಾಯತೆಯಿಂದ ಅವನ ತಲೆ ಸವರಿದರು.
ಹೊಸ ಪಾಲೀಶ್ ಡಬ್ಬ ಖರೀದಿಸಿದ ರಾಮ ದಣಿವರಿಯದೆ ದುಡಿದ….ಇಂದು……….ಅಂದು ತಾನೇ ಪಾಲೀಶ್ ಮಾಡುತ್ತಿದ್ದ ಅದೆಷ್ಟೋ ಹೆಸರಾಂತ ಕಪೆನಿಗಳ ಬೂಟುಗಳ ಬಹುದೊಡ್ಡ ಶಾಖೆಯನ್ನೇ ತಾನು ಹೊಂದಿದ್ದಾನೆ ರಾಮ. ತಾನು ಅಂದು ಆ ಮಾಸಲು ಬಟ್ಟೆಯಲ್ಲಿ ದಣಿವರಿಯದೆ ಬೂಟು ಪಾಲೀಶ್ ಮಾಡುತ್ತಿರುವ ಚಿತ್ರ ಅವನ ಆಫೀಸಿನ ಗೋಡೆಯನ್ನಲಂಕರಿಸಿದೆ.
ಪಕ್ಕದಲ್ಲೇ ಮುತ್ತುಸ್ವಾಮಿ ದೀಕ್ಷಿತರ ವಾತ್ಸಲ್ಯ ಸೂಸುವ ನಗುಮೊಗದ ಚಿತ್ರವೂ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…