ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಗಳಾಗುವ ಅಭ್ಯರ್ಥಿಗಳಿಗೆ ಮಾಹಿತಿ ನೀಡುವಲ್ಲಿ ಹಾಗೂ ಉದ್ಯೋಗಾವಕಾಶಗಳನ್ನು ಅರಸುವವರಿಗೆ ಮಾರ್ಗದರ್ಶಿಯಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಅರಿವು ಕೇಂದ್ರಗಳಲ್ಲಿ ವಿಶೇಷ ಚೇತನರಿಗೆ ಸ್ನೇಹಮಯಿ ಸಾಧನಗಳನ್ನು ವಿತರಿಸುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದ 6 ಸಾವಿರ ಗ್ರಾಮ ಪಂಚಾಯತ್ ಗಳು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಗ್ರಾಮೀಣ ಪ್ರದೇಶದಲ್ಲಿ ಒಟ್ಟು 5 ಸಾವಿರದ 888 ಗ್ರಾಮ ಪಂಚಾಯತ್ ಅರಿವು ಕೇಂದ್ರಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, 5ಸಾವಿರದ 767 ಅರಿವು ಕೇಂದ್ರಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ, ಈ ಕೇಂದ್ರಗಳಲ್ಲಿ ʼಓದುವ ಬೆಳಕುʼ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಗ್ರಾಮ ಪಂಚಾಯತ್ ಅರಿವು ಕೇಂದ್ರಗಳಲ್ಲಿ ಸುಮಾರು 50 ಲಕ್ಷ ಮಕ್ಕಳು ನೋಂದಾಯಿಸಲ್ಪಟ್ಟಿದ್ದಾರೆ ಎಂದೂ ಸಚಿವರು ಮಾಹಿತಿ ನೀಡಿದರು.
ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮಕ್ಕಾಗಿ 42,289 ಮಂದಿ ಅರ್ಜಿ ಸಲ್ಲಿಸಿದ್ದಾರೆ…
ಕನ್ನಡವನ್ನು ಕಲುಷಿತ ಮಾಡಿರುವ ಪರಕೀಯ ಶಬ್ದಗಳನ್ನು ಅವರಿಗೇ ಬಿಟ್ಟುಬಿಡೋಣ. ಶುದ್ಧ ಕನ್ನಡದ ಸುಂದರ…
ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಏಳು ಜನ…
ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್…
ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯವಾಗಲಿದೆ ಎಂದು ದಾವಣಗೆರೆ…