#KrishiMela| ಧಾರವಾಡ ವಿವಿ ಕೃಷಿ ಮೇಳದ ದಿನಾಂಕ ಘೋಷಣೆ | ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ಮೇಳ

July 29, 2023
10:50 PM
ಸೆಪ್ಟಂಬರ್‌ ತಿಂಗಳ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಧಾರವಾಡ ಕೃಷಿ ವಿವಿಯಿಂದ ಕೃಷಿ ಮೇಳ ನಡೆಯಲಿದೆ.

ಪ್ರತಿ ವರ್ಷದ ಬಗ್ಗೆ ಸಾಮಾನ್ಯವಾಗಿ ಎಲ್ಲ ರೈತರಿಗೂ ಸಹಜ ಕಾತರವಿರುತ್ತದೆ. ಇದೀಗ ಕೊನೆಗೂ ಧಾರವಾಡ ಕೃಷಿ ಮೇಳ#Krishi Melaದ ದಿನಾಂಕ ಘೋಷಿಸಲಾಗಿದೆ. ಸೆಪ್ಟಂಬರ್‌ ತಿಂಗಳ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ನಡೆಯಲಿದೆ. ಈ ಬಾರಿಯ ಕೃಷಿ ಮೇಳವನ್ನು “ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ನಡೆಯಲಿದೆ.

ಸಿರಿಧಾನ್ಯಗಳಿಗೆ ಆದ್ಯತೆ; ಅಂತರಾಷ್ಟ್ರೀಯ ಮಟ್ಟದಲ್ಲಿ 2023ನೇ ಇಸವಿಯನ್ನು “ಸಿರಿ ಧಾನ್ಯಗಳ ವರ್ಷ” ಎಂದು ಘೋಷಿಸಿರುವ ಹಿನ್ನೆಲೆ ಈ ಬಾರಿಯ ಕೃಷಿ ಮೇಳದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳ ಬಗ್ಗೆ ಪ್ರಾಮುಖ್ಯತೆ ಕೊಡಲಾಗಿದೆ.

ಏನು ವಿಶೇಷತೆ?: ಸಿರಿಧಾನ್ಯ ಬೆಳೆಗಳಾದ ಬರಗು, ರಾಗಿ, ಊದಲು, ನವಣೆ, ಸಾವಿ, ಸಜ್ಜೆ ಈ ಬೆಳೆಗಳ ಪ್ರದರ್ಶನ, ಮಾಹಿತಿ, ಮಾರುಕಟ್ಟೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಒದಗಿಸಲಾಗುತ್ತದೆ. ಜೊತೆಗೆ ರೈತ #Farmerರ ಜೊತೆಗೆ ಸಂವಾದ, ಚರ್ಚಾ ಗೋಷ್ಠಿ ಹಾಗೂ ನೂತನ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror