ಪ್ರತಿ ವರ್ಷದ ಬಗ್ಗೆ ಸಾಮಾನ್ಯವಾಗಿ ಎಲ್ಲ ರೈತರಿಗೂ ಸಹಜ ಕಾತರವಿರುತ್ತದೆ. ಇದೀಗ ಕೊನೆಗೂ ಧಾರವಾಡ ಕೃಷಿ ಮೇಳ#Krishi Melaದ ದಿನಾಂಕ ಘೋಷಿಸಲಾಗಿದೆ. ಸೆಪ್ಟಂಬರ್ ತಿಂಗಳ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ನಡೆಯಲಿದೆ. ಈ ಬಾರಿಯ ಕೃಷಿ ಮೇಳವನ್ನು “ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ನಡೆಯಲಿದೆ.
ಸಿರಿಧಾನ್ಯಗಳಿಗೆ ಆದ್ಯತೆ; ಅಂತರಾಷ್ಟ್ರೀಯ ಮಟ್ಟದಲ್ಲಿ 2023ನೇ ಇಸವಿಯನ್ನು “ಸಿರಿ ಧಾನ್ಯಗಳ ವರ್ಷ” ಎಂದು ಘೋಷಿಸಿರುವ ಹಿನ್ನೆಲೆ ಈ ಬಾರಿಯ ಕೃಷಿ ಮೇಳದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳ ಬಗ್ಗೆ ಪ್ರಾಮುಖ್ಯತೆ ಕೊಡಲಾಗಿದೆ.
ಏನು ವಿಶೇಷತೆ?: ಸಿರಿಧಾನ್ಯ ಬೆಳೆಗಳಾದ ಬರಗು, ರಾಗಿ, ಊದಲು, ನವಣೆ, ಸಾವಿ, ಸಜ್ಜೆ ಈ ಬೆಳೆಗಳ ಪ್ರದರ್ಶನ, ಮಾಹಿತಿ, ಮಾರುಕಟ್ಟೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಒದಗಿಸಲಾಗುತ್ತದೆ. ಜೊತೆಗೆ ರೈತ #Farmerರ ಜೊತೆಗೆ ಸಂವಾದ, ಚರ್ಚಾ ಗೋಷ್ಠಿ ಹಾಗೂ ನೂತನ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ನಡೆಯಲಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…