Advertisement
ಸುದ್ದಿಗಳು

ತಂದೆಯ ಅಂತ್ಯಸಂಸ್ಕಾರ ಕಾರ್ಯ ನೆರವೇರಿಸಿದ ಇಬ್ಬರು ಹೆಣ್ಣು ಮಕ್ಕಳು |

Share

ಹೆಣ್ಣು ಮಕ್ಕಳಿಬ್ಬರು ಮುಂದೆ ನಿಂತು ತಂದೆಯ ಅಂತ್ಯ ಸಂಸ್ಕಾರ ಕಾರ್ಯವನ್ನು ನೆರವೇರಿಸಿದ ಘಟನೆ ತುಮಕೂರಿನಲ್ಲಿ  ನಡೆದಿದೆ. ಅನಾರೋಗ್ಯದಿಂದ ಗಂಗಾಧರ್‌ ಎಂಬವರು ಮೃತಪಟ್ಟಿದ್ದು, ಇವರ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಇಬ್ಬರು ಪುತ್ರಿಯರಾದ ಸವಿತಾ ಮತ್ತು ಲಕ್ಷ್ಮಿ ನೆರವೇರಿಸಿ ಸಮಾಜಕ್ಕೆ ಹೊಸ ಸಂದೇಶ ರವಾನಿಸಿದ್ದಾರೆ.

Advertisement
Advertisement

ತುಮಕೂರಿನ ಚಿಕ್ಕಪೇಟೆಯ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ಮಂಡಳಿಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಗಂಗಾಧರ್‌ ಎಂಬವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಗಂಡು ಮಕ್ಕಳಿರಲಿಲ್ಲ. ಜೀವಿತಾವಧಿಯಲ್ಲಿ ಅತ್ಯಂತ ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದರು.

ತಮ್ಮ ತಂದೆಯ ಆಸೆಯಂತೆ ತುಮಕೂರು ನಗರದ ಗಾರ್ಡನ್ ರಸ್ತೆಯ ಚಿತಾಗಾರದಲ್ಲಿ ಇಬ್ಬರು ಹೆಣ್ಣುಮಕ್ಕಳೇ ಅಂತ್ಯಸಂಸ್ಕಾರವನ್ನು ನೆರವೇರಿಸಿ ಎಲ್ಲಾ ಹೆಣ್ಣು ಮಕ್ಕಳಿಗೆ ಮಾದರಿಯಾಗಿದ್ದಾರೆ. ಹಿಂದೂ ಸಂಪ್ರದಾಯದಲ್ಲಿ ಕೇವಲ ಗಂಡು ಮಕ್ಕಳು ಮಾತ್ರ ತಂದೆಯ ಅಂತಿಮ ವಿಧಿವಿಧಾನ ನೆರವೇರಿಸಲು ಅವಕಾಶ ಇದ್ದು, ಗಂಡು ಮಕ್ಕಳು ಇಲ್ಲದಿದ್ದಲ್ಲಿ  ಕುಟುಂಬಸ್ಥರಿಗೆ ಆ ಅವಕಾಶ ಸಿಗುತ್ತಿತ್ತು. ಇದೀಗ ಹೆಣ್ಣುಮಕ್ಕಳೇ ಅಂತಿಮ ವಿಧಿವಿಧಾನ ನೆರವೇರಿಸಿರುವುದು ವಿಶೇಷವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

20 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

20 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

20 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

20 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago