ಹೆಣ್ಣು ಮಕ್ಕಳಿಬ್ಬರು ಮುಂದೆ ನಿಂತು ತಂದೆಯ ಅಂತ್ಯ ಸಂಸ್ಕಾರ ಕಾರ್ಯವನ್ನು ನೆರವೇರಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಅನಾರೋಗ್ಯದಿಂದ ಗಂಗಾಧರ್ ಎಂಬವರು ಮೃತಪಟ್ಟಿದ್ದು, ಇವರ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಇಬ್ಬರು ಪುತ್ರಿಯರಾದ ಸವಿತಾ ಮತ್ತು ಲಕ್ಷ್ಮಿ ನೆರವೇರಿಸಿ ಸಮಾಜಕ್ಕೆ ಹೊಸ ಸಂದೇಶ ರವಾನಿಸಿದ್ದಾರೆ.
ತುಮಕೂರಿನ ಚಿಕ್ಕಪೇಟೆಯ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ಮಂಡಳಿಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಗಂಗಾಧರ್ ಎಂಬವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಗಂಡು ಮಕ್ಕಳಿರಲಿಲ್ಲ. ಜೀವಿತಾವಧಿಯಲ್ಲಿ ಅತ್ಯಂತ ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದರು.
ತಮ್ಮ ತಂದೆಯ ಆಸೆಯಂತೆ ತುಮಕೂರು ನಗರದ ಗಾರ್ಡನ್ ರಸ್ತೆಯ ಚಿತಾಗಾರದಲ್ಲಿ ಇಬ್ಬರು ಹೆಣ್ಣುಮಕ್ಕಳೇ ಅಂತ್ಯಸಂಸ್ಕಾರವನ್ನು ನೆರವೇರಿಸಿ ಎಲ್ಲಾ ಹೆಣ್ಣು ಮಕ್ಕಳಿಗೆ ಮಾದರಿಯಾಗಿದ್ದಾರೆ. ಹಿಂದೂ ಸಂಪ್ರದಾಯದಲ್ಲಿ ಕೇವಲ ಗಂಡು ಮಕ್ಕಳು ಮಾತ್ರ ತಂದೆಯ ಅಂತಿಮ ವಿಧಿವಿಧಾನ ನೆರವೇರಿಸಲು ಅವಕಾಶ ಇದ್ದು, ಗಂಡು ಮಕ್ಕಳು ಇಲ್ಲದಿದ್ದಲ್ಲಿ ಕುಟುಂಬಸ್ಥರಿಗೆ ಆ ಅವಕಾಶ ಸಿಗುತ್ತಿತ್ತು. ಇದೀಗ ಹೆಣ್ಣುಮಕ್ಕಳೇ ಅಂತಿಮ ವಿಧಿವಿಧಾನ ನೆರವೇರಿಸಿರುವುದು ವಿಶೇಷವಾಗಿದೆ.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…