ಹೆಣ್ಣು ಮಕ್ಕಳಿಬ್ಬರು ಮುಂದೆ ನಿಂತು ತಂದೆಯ ಅಂತ್ಯ ಸಂಸ್ಕಾರ ಕಾರ್ಯವನ್ನು ನೆರವೇರಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಅನಾರೋಗ್ಯದಿಂದ ಗಂಗಾಧರ್ ಎಂಬವರು ಮೃತಪಟ್ಟಿದ್ದು, ಇವರ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಇಬ್ಬರು ಪುತ್ರಿಯರಾದ ಸವಿತಾ ಮತ್ತು ಲಕ್ಷ್ಮಿ ನೆರವೇರಿಸಿ ಸಮಾಜಕ್ಕೆ ಹೊಸ ಸಂದೇಶ ರವಾನಿಸಿದ್ದಾರೆ.
ತುಮಕೂರಿನ ಚಿಕ್ಕಪೇಟೆಯ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ಮಂಡಳಿಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಗಂಗಾಧರ್ ಎಂಬವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಗಂಡು ಮಕ್ಕಳಿರಲಿಲ್ಲ. ಜೀವಿತಾವಧಿಯಲ್ಲಿ ಅತ್ಯಂತ ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದರು.
ತಮ್ಮ ತಂದೆಯ ಆಸೆಯಂತೆ ತುಮಕೂರು ನಗರದ ಗಾರ್ಡನ್ ರಸ್ತೆಯ ಚಿತಾಗಾರದಲ್ಲಿ ಇಬ್ಬರು ಹೆಣ್ಣುಮಕ್ಕಳೇ ಅಂತ್ಯಸಂಸ್ಕಾರವನ್ನು ನೆರವೇರಿಸಿ ಎಲ್ಲಾ ಹೆಣ್ಣು ಮಕ್ಕಳಿಗೆ ಮಾದರಿಯಾಗಿದ್ದಾರೆ. ಹಿಂದೂ ಸಂಪ್ರದಾಯದಲ್ಲಿ ಕೇವಲ ಗಂಡು ಮಕ್ಕಳು ಮಾತ್ರ ತಂದೆಯ ಅಂತಿಮ ವಿಧಿವಿಧಾನ ನೆರವೇರಿಸಲು ಅವಕಾಶ ಇದ್ದು, ಗಂಡು ಮಕ್ಕಳು ಇಲ್ಲದಿದ್ದಲ್ಲಿ ಕುಟುಂಬಸ್ಥರಿಗೆ ಆ ಅವಕಾಶ ಸಿಗುತ್ತಿತ್ತು. ಇದೀಗ ಹೆಣ್ಣುಮಕ್ಕಳೇ ಅಂತಿಮ ವಿಧಿವಿಧಾನ ನೆರವೇರಿಸಿರುವುದು ವಿಶೇಷವಾಗಿದೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…