ಹೆಣ್ಣು ಮಕ್ಕಳಿಬ್ಬರು ಮುಂದೆ ನಿಂತು ತಂದೆಯ ಅಂತ್ಯ ಸಂಸ್ಕಾರ ಕಾರ್ಯವನ್ನು ನೆರವೇರಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಅನಾರೋಗ್ಯದಿಂದ ಗಂಗಾಧರ್ ಎಂಬವರು ಮೃತಪಟ್ಟಿದ್ದು, ಇವರ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಇಬ್ಬರು ಪುತ್ರಿಯರಾದ ಸವಿತಾ ಮತ್ತು ಲಕ್ಷ್ಮಿ ನೆರವೇರಿಸಿ ಸಮಾಜಕ್ಕೆ ಹೊಸ ಸಂದೇಶ ರವಾನಿಸಿದ್ದಾರೆ.
ತುಮಕೂರಿನ ಚಿಕ್ಕಪೇಟೆಯ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ಮಂಡಳಿಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಗಂಗಾಧರ್ ಎಂಬವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಗಂಡು ಮಕ್ಕಳಿರಲಿಲ್ಲ. ಜೀವಿತಾವಧಿಯಲ್ಲಿ ಅತ್ಯಂತ ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದರು.
ತಮ್ಮ ತಂದೆಯ ಆಸೆಯಂತೆ ತುಮಕೂರು ನಗರದ ಗಾರ್ಡನ್ ರಸ್ತೆಯ ಚಿತಾಗಾರದಲ್ಲಿ ಇಬ್ಬರು ಹೆಣ್ಣುಮಕ್ಕಳೇ ಅಂತ್ಯಸಂಸ್ಕಾರವನ್ನು ನೆರವೇರಿಸಿ ಎಲ್ಲಾ ಹೆಣ್ಣು ಮಕ್ಕಳಿಗೆ ಮಾದರಿಯಾಗಿದ್ದಾರೆ. ಹಿಂದೂ ಸಂಪ್ರದಾಯದಲ್ಲಿ ಕೇವಲ ಗಂಡು ಮಕ್ಕಳು ಮಾತ್ರ ತಂದೆಯ ಅಂತಿಮ ವಿಧಿವಿಧಾನ ನೆರವೇರಿಸಲು ಅವಕಾಶ ಇದ್ದು, ಗಂಡು ಮಕ್ಕಳು ಇಲ್ಲದಿದ್ದಲ್ಲಿ ಕುಟುಂಬಸ್ಥರಿಗೆ ಆ ಅವಕಾಶ ಸಿಗುತ್ತಿತ್ತು. ಇದೀಗ ಹೆಣ್ಣುಮಕ್ಕಳೇ ಅಂತಿಮ ವಿಧಿವಿಧಾನ ನೆರವೇರಿಸಿರುವುದು ವಿಶೇಷವಾಗಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…