ಸಾವಿನ ಮೊದಲೇ ಸಮಾಧಿ ನಿರ್ಮಿಸಿದ ವ್ಯಕ್ತಿ….! |

March 8, 2022
4:24 PM

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜರೇಕಟ್ಟೆ ಗ್ರಾಮದ ನಿವಾಸಿ ತಿಪ್ಪಣ್ಣರಾವ್ ಎಂಬುವವರು ಸಾವಿನ ಮೊದಲೇ ತನಗೆ ತಾನೇ ಸಮಾಧಿ ನಿರ್ಮಿಸಿಕೊಂಡ ಅಪರೂಪದ ಘಟನೆ ವರದಿಯಾಗಿದೆ.

ಸಾಮಾನ್ಯವಾಗಿ ವ್ಯಕ್ತಿ ಸಾವನ್ನಪ್ಪಿದ ನಂತರ ಗುಂಡಿ ತೋಡಿ ಮಣ್ಣು ಮಾಡ್ತಾರೆ. ಆದರೆ ಈ ವ್ಯಕ್ತಿ  ಮರಣಕ್ಕೂ ಮೊದಲೇ ಸಮಾಧಿಯನ್ನು ತಯಾರಿಸಿಕೊಂಡಿದ್ದಾರೆ. 70 ವರ್ಷದ ತಿಪ್ಪಣ್ಣ ಕಳೆದ ಹದಿನೈದು ವರ್ಷಗಳ ಹಿಂದೆಯೇ ಈ ಸಮಾಧಿಯನ್ನು ನಿರ್ಮಾಣ ಮಾಡಿದ್ದು, ಅದಕ್ಕೆ ಮರಳಿ ಮಣ್ಣಿಗೆ ಎಂದು ಹೆಸರಿಟ್ಟಿದ್ದಾರೆ. ಏಕೆ ಈ ಸಮಾಧಿ ಎಂದರೆ, ಜೀವನದಲ್ಲಿ ಜಿಗುಪ್ಸೆ ಎನ್ನುತ್ತಾರೆ.

ಯಾರೊಬ್ಬರ ಬಳಿಯೂ ಹಣ ಪಡೆಯದೆ ತಾವೇ ದುಡಿದು ಸಮಾಧಿ ನಿರ್ಮಾಣ ಮಾಡಿಕೊಂಡಿದ್ದಾರೆ. ತಾನು ಸತ್ತರೆ ಇದೇ ಸಮಾಧಿಯಲ್ಲಿ ಹೂಳುವಂತೆ ತಮ್ಮ ಮಕ್ಕಳಿಗೆ ಹೇಳಿದ್ದಾರೆ.ಇದೇ ಸಮಾಧಿ ಮುಂದೆ ಪುಟ್ಟ ದೇವಾಲಯವನ್ನೂ ನಿರ್ಮಾಣ ಮಾಡಿ ಬರುವವರಿಗೆ ವಿಶ್ರಾಂತಿ ಪಡೆಯಲು ತಂಗುದಾಣ ಮಾಡಿದ್ದಾರೆ. ಮರಳಿ ಮಣ್ಣಿಗೆ ಸೇರುವ ಜ್ಞಾನೋದಯ ಇಲ್ಲಿ ಸದಾ ಜಾಗೃತವಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
August 3, 2026
4:38 PM
by: ದ ರೂರಲ್ ಮಿರರ್.ಕಾಂ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror