ಸಾವಿನ ಮೊದಲೇ ಸಮಾಧಿ ನಿರ್ಮಿಸಿದ ವ್ಯಕ್ತಿ….! |

March 8, 2022
4:24 PM

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜರೇಕಟ್ಟೆ ಗ್ರಾಮದ ನಿವಾಸಿ ತಿಪ್ಪಣ್ಣರಾವ್ ಎಂಬುವವರು ಸಾವಿನ ಮೊದಲೇ ತನಗೆ ತಾನೇ ಸಮಾಧಿ ನಿರ್ಮಿಸಿಕೊಂಡ ಅಪರೂಪದ ಘಟನೆ ವರದಿಯಾಗಿದೆ.

ಸಾಮಾನ್ಯವಾಗಿ ವ್ಯಕ್ತಿ ಸಾವನ್ನಪ್ಪಿದ ನಂತರ ಗುಂಡಿ ತೋಡಿ ಮಣ್ಣು ಮಾಡ್ತಾರೆ. ಆದರೆ ಈ ವ್ಯಕ್ತಿ  ಮರಣಕ್ಕೂ ಮೊದಲೇ ಸಮಾಧಿಯನ್ನು ತಯಾರಿಸಿಕೊಂಡಿದ್ದಾರೆ. 70 ವರ್ಷದ ತಿಪ್ಪಣ್ಣ ಕಳೆದ ಹದಿನೈದು ವರ್ಷಗಳ ಹಿಂದೆಯೇ ಈ ಸಮಾಧಿಯನ್ನು ನಿರ್ಮಾಣ ಮಾಡಿದ್ದು, ಅದಕ್ಕೆ ಮರಳಿ ಮಣ್ಣಿಗೆ ಎಂದು ಹೆಸರಿಟ್ಟಿದ್ದಾರೆ. ಏಕೆ ಈ ಸಮಾಧಿ ಎಂದರೆ, ಜೀವನದಲ್ಲಿ ಜಿಗುಪ್ಸೆ ಎನ್ನುತ್ತಾರೆ.

ಯಾರೊಬ್ಬರ ಬಳಿಯೂ ಹಣ ಪಡೆಯದೆ ತಾವೇ ದುಡಿದು ಸಮಾಧಿ ನಿರ್ಮಾಣ ಮಾಡಿಕೊಂಡಿದ್ದಾರೆ. ತಾನು ಸತ್ತರೆ ಇದೇ ಸಮಾಧಿಯಲ್ಲಿ ಹೂಳುವಂತೆ ತಮ್ಮ ಮಕ್ಕಳಿಗೆ ಹೇಳಿದ್ದಾರೆ.ಇದೇ ಸಮಾಧಿ ಮುಂದೆ ಪುಟ್ಟ ದೇವಾಲಯವನ್ನೂ ನಿರ್ಮಾಣ ಮಾಡಿ ಬರುವವರಿಗೆ ವಿಶ್ರಾಂತಿ ಪಡೆಯಲು ತಂಗುದಾಣ ಮಾಡಿದ್ದಾರೆ. ಮರಳಿ ಮಣ್ಣಿಗೆ ಸೇರುವ ಜ್ಞಾನೋದಯ ಇಲ್ಲಿ ಸದಾ ಜಾಗೃತವಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror