ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜರೇಕಟ್ಟೆ ಗ್ರಾಮದ ನಿವಾಸಿ ತಿಪ್ಪಣ್ಣರಾವ್ ಎಂಬುವವರು ಸಾವಿನ ಮೊದಲೇ ತನಗೆ ತಾನೇ ಸಮಾಧಿ ನಿರ್ಮಿಸಿಕೊಂಡ ಅಪರೂಪದ ಘಟನೆ ವರದಿಯಾಗಿದೆ.
ಸಾಮಾನ್ಯವಾಗಿ ವ್ಯಕ್ತಿ ಸಾವನ್ನಪ್ಪಿದ ನಂತರ ಗುಂಡಿ ತೋಡಿ ಮಣ್ಣು ಮಾಡ್ತಾರೆ. ಆದರೆ ಈ ವ್ಯಕ್ತಿ ಮರಣಕ್ಕೂ ಮೊದಲೇ ಸಮಾಧಿಯನ್ನು ತಯಾರಿಸಿಕೊಂಡಿದ್ದಾರೆ. 70 ವರ್ಷದ ತಿಪ್ಪಣ್ಣ ಕಳೆದ ಹದಿನೈದು ವರ್ಷಗಳ ಹಿಂದೆಯೇ ಈ ಸಮಾಧಿಯನ್ನು ನಿರ್ಮಾಣ ಮಾಡಿದ್ದು, ಅದಕ್ಕೆ ಮರಳಿ ಮಣ್ಣಿಗೆ ಎಂದು ಹೆಸರಿಟ್ಟಿದ್ದಾರೆ. ಏಕೆ ಈ ಸಮಾಧಿ ಎಂದರೆ, ಜೀವನದಲ್ಲಿ ಜಿಗುಪ್ಸೆ ಎನ್ನುತ್ತಾರೆ.
ಯಾರೊಬ್ಬರ ಬಳಿಯೂ ಹಣ ಪಡೆಯದೆ ತಾವೇ ದುಡಿದು ಸಮಾಧಿ ನಿರ್ಮಾಣ ಮಾಡಿಕೊಂಡಿದ್ದಾರೆ. ತಾನು ಸತ್ತರೆ ಇದೇ ಸಮಾಧಿಯಲ್ಲಿ ಹೂಳುವಂತೆ ತಮ್ಮ ಮಕ್ಕಳಿಗೆ ಹೇಳಿದ್ದಾರೆ.ಇದೇ ಸಮಾಧಿ ಮುಂದೆ ಪುಟ್ಟ ದೇವಾಲಯವನ್ನೂ ನಿರ್ಮಾಣ ಮಾಡಿ ಬರುವವರಿಗೆ ವಿಶ್ರಾಂತಿ ಪಡೆಯಲು ತಂಗುದಾಣ ಮಾಡಿದ್ದಾರೆ. ಮರಳಿ ಮಣ್ಣಿಗೆ ಸೇರುವ ಜ್ಞಾನೋದಯ ಇಲ್ಲಿ ಸದಾ ಜಾಗೃತವಾಗುತ್ತದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…