ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜರೇಕಟ್ಟೆ ಗ್ರಾಮದ ನಿವಾಸಿ ತಿಪ್ಪಣ್ಣರಾವ್ ಎಂಬುವವರು ಸಾವಿನ ಮೊದಲೇ ತನಗೆ ತಾನೇ ಸಮಾಧಿ ನಿರ್ಮಿಸಿಕೊಂಡ ಅಪರೂಪದ ಘಟನೆ ವರದಿಯಾಗಿದೆ.
ಸಾಮಾನ್ಯವಾಗಿ ವ್ಯಕ್ತಿ ಸಾವನ್ನಪ್ಪಿದ ನಂತರ ಗುಂಡಿ ತೋಡಿ ಮಣ್ಣು ಮಾಡ್ತಾರೆ. ಆದರೆ ಈ ವ್ಯಕ್ತಿ ಮರಣಕ್ಕೂ ಮೊದಲೇ ಸಮಾಧಿಯನ್ನು ತಯಾರಿಸಿಕೊಂಡಿದ್ದಾರೆ. 70 ವರ್ಷದ ತಿಪ್ಪಣ್ಣ ಕಳೆದ ಹದಿನೈದು ವರ್ಷಗಳ ಹಿಂದೆಯೇ ಈ ಸಮಾಧಿಯನ್ನು ನಿರ್ಮಾಣ ಮಾಡಿದ್ದು, ಅದಕ್ಕೆ ಮರಳಿ ಮಣ್ಣಿಗೆ ಎಂದು ಹೆಸರಿಟ್ಟಿದ್ದಾರೆ. ಏಕೆ ಈ ಸಮಾಧಿ ಎಂದರೆ, ಜೀವನದಲ್ಲಿ ಜಿಗುಪ್ಸೆ ಎನ್ನುತ್ತಾರೆ.
ಯಾರೊಬ್ಬರ ಬಳಿಯೂ ಹಣ ಪಡೆಯದೆ ತಾವೇ ದುಡಿದು ಸಮಾಧಿ ನಿರ್ಮಾಣ ಮಾಡಿಕೊಂಡಿದ್ದಾರೆ. ತಾನು ಸತ್ತರೆ ಇದೇ ಸಮಾಧಿಯಲ್ಲಿ ಹೂಳುವಂತೆ ತಮ್ಮ ಮಕ್ಕಳಿಗೆ ಹೇಳಿದ್ದಾರೆ.ಇದೇ ಸಮಾಧಿ ಮುಂದೆ ಪುಟ್ಟ ದೇವಾಲಯವನ್ನೂ ನಿರ್ಮಾಣ ಮಾಡಿ ಬರುವವರಿಗೆ ವಿಶ್ರಾಂತಿ ಪಡೆಯಲು ತಂಗುದಾಣ ಮಾಡಿದ್ದಾರೆ. ಮರಳಿ ಮಣ್ಣಿಗೆ ಸೇರುವ ಜ್ಞಾನೋದಯ ಇಲ್ಲಿ ಸದಾ ಜಾಗೃತವಾಗುತ್ತದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…