ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜರೇಕಟ್ಟೆ ಗ್ರಾಮದ ನಿವಾಸಿ ತಿಪ್ಪಣ್ಣರಾವ್ ಎಂಬುವವರು ಸಾವಿನ ಮೊದಲೇ ತನಗೆ ತಾನೇ ಸಮಾಧಿ ನಿರ್ಮಿಸಿಕೊಂಡ ಅಪರೂಪದ ಘಟನೆ ವರದಿಯಾಗಿದೆ.
ಸಾಮಾನ್ಯವಾಗಿ ವ್ಯಕ್ತಿ ಸಾವನ್ನಪ್ಪಿದ ನಂತರ ಗುಂಡಿ ತೋಡಿ ಮಣ್ಣು ಮಾಡ್ತಾರೆ. ಆದರೆ ಈ ವ್ಯಕ್ತಿ ಮರಣಕ್ಕೂ ಮೊದಲೇ ಸಮಾಧಿಯನ್ನು ತಯಾರಿಸಿಕೊಂಡಿದ್ದಾರೆ. 70 ವರ್ಷದ ತಿಪ್ಪಣ್ಣ ಕಳೆದ ಹದಿನೈದು ವರ್ಷಗಳ ಹಿಂದೆಯೇ ಈ ಸಮಾಧಿಯನ್ನು ನಿರ್ಮಾಣ ಮಾಡಿದ್ದು, ಅದಕ್ಕೆ ಮರಳಿ ಮಣ್ಣಿಗೆ ಎಂದು ಹೆಸರಿಟ್ಟಿದ್ದಾರೆ. ಏಕೆ ಈ ಸಮಾಧಿ ಎಂದರೆ, ಜೀವನದಲ್ಲಿ ಜಿಗುಪ್ಸೆ ಎನ್ನುತ್ತಾರೆ.
ಯಾರೊಬ್ಬರ ಬಳಿಯೂ ಹಣ ಪಡೆಯದೆ ತಾವೇ ದುಡಿದು ಸಮಾಧಿ ನಿರ್ಮಾಣ ಮಾಡಿಕೊಂಡಿದ್ದಾರೆ. ತಾನು ಸತ್ತರೆ ಇದೇ ಸಮಾಧಿಯಲ್ಲಿ ಹೂಳುವಂತೆ ತಮ್ಮ ಮಕ್ಕಳಿಗೆ ಹೇಳಿದ್ದಾರೆ.ಇದೇ ಸಮಾಧಿ ಮುಂದೆ ಪುಟ್ಟ ದೇವಾಲಯವನ್ನೂ ನಿರ್ಮಾಣ ಮಾಡಿ ಬರುವವರಿಗೆ ವಿಶ್ರಾಂತಿ ಪಡೆಯಲು ತಂಗುದಾಣ ಮಾಡಿದ್ದಾರೆ. ಮರಳಿ ಮಣ್ಣಿಗೆ ಸೇರುವ ಜ್ಞಾನೋದಯ ಇಲ್ಲಿ ಸದಾ ಜಾಗೃತವಾಗುತ್ತದೆ.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…