ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜರೇಕಟ್ಟೆ ಗ್ರಾಮದ ನಿವಾಸಿ ತಿಪ್ಪಣ್ಣರಾವ್ ಎಂಬುವವರು ಸಾವಿನ ಮೊದಲೇ ತನಗೆ ತಾನೇ ಸಮಾಧಿ ನಿರ್ಮಿಸಿಕೊಂಡ ಅಪರೂಪದ ಘಟನೆ ವರದಿಯಾಗಿದೆ.
ಸಾಮಾನ್ಯವಾಗಿ ವ್ಯಕ್ತಿ ಸಾವನ್ನಪ್ಪಿದ ನಂತರ ಗುಂಡಿ ತೋಡಿ ಮಣ್ಣು ಮಾಡ್ತಾರೆ. ಆದರೆ ಈ ವ್ಯಕ್ತಿ ಮರಣಕ್ಕೂ ಮೊದಲೇ ಸಮಾಧಿಯನ್ನು ತಯಾರಿಸಿಕೊಂಡಿದ್ದಾರೆ. 70 ವರ್ಷದ ತಿಪ್ಪಣ್ಣ ಕಳೆದ ಹದಿನೈದು ವರ್ಷಗಳ ಹಿಂದೆಯೇ ಈ ಸಮಾಧಿಯನ್ನು ನಿರ್ಮಾಣ ಮಾಡಿದ್ದು, ಅದಕ್ಕೆ ಮರಳಿ ಮಣ್ಣಿಗೆ ಎಂದು ಹೆಸರಿಟ್ಟಿದ್ದಾರೆ. ಏಕೆ ಈ ಸಮಾಧಿ ಎಂದರೆ, ಜೀವನದಲ್ಲಿ ಜಿಗುಪ್ಸೆ ಎನ್ನುತ್ತಾರೆ.
ಯಾರೊಬ್ಬರ ಬಳಿಯೂ ಹಣ ಪಡೆಯದೆ ತಾವೇ ದುಡಿದು ಸಮಾಧಿ ನಿರ್ಮಾಣ ಮಾಡಿಕೊಂಡಿದ್ದಾರೆ. ತಾನು ಸತ್ತರೆ ಇದೇ ಸಮಾಧಿಯಲ್ಲಿ ಹೂಳುವಂತೆ ತಮ್ಮ ಮಕ್ಕಳಿಗೆ ಹೇಳಿದ್ದಾರೆ.ಇದೇ ಸಮಾಧಿ ಮುಂದೆ ಪುಟ್ಟ ದೇವಾಲಯವನ್ನೂ ನಿರ್ಮಾಣ ಮಾಡಿ ಬರುವವರಿಗೆ ವಿಶ್ರಾಂತಿ ಪಡೆಯಲು ತಂಗುದಾಣ ಮಾಡಿದ್ದಾರೆ. ಮರಳಿ ಮಣ್ಣಿಗೆ ಸೇರುವ ಜ್ಞಾನೋದಯ ಇಲ್ಲಿ ಸದಾ ಜಾಗೃತವಾಗುತ್ತದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…