ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜರೇಕಟ್ಟೆ ಗ್ರಾಮದ ನಿವಾಸಿ ತಿಪ್ಪಣ್ಣರಾವ್ ಎಂಬುವವರು ಸಾವಿನ ಮೊದಲೇ ತನಗೆ ತಾನೇ ಸಮಾಧಿ ನಿರ್ಮಿಸಿಕೊಂಡ ಅಪರೂಪದ ಘಟನೆ ವರದಿಯಾಗಿದೆ.
ಸಾಮಾನ್ಯವಾಗಿ ವ್ಯಕ್ತಿ ಸಾವನ್ನಪ್ಪಿದ ನಂತರ ಗುಂಡಿ ತೋಡಿ ಮಣ್ಣು ಮಾಡ್ತಾರೆ. ಆದರೆ ಈ ವ್ಯಕ್ತಿ ಮರಣಕ್ಕೂ ಮೊದಲೇ ಸಮಾಧಿಯನ್ನು ತಯಾರಿಸಿಕೊಂಡಿದ್ದಾರೆ. 70 ವರ್ಷದ ತಿಪ್ಪಣ್ಣ ಕಳೆದ ಹದಿನೈದು ವರ್ಷಗಳ ಹಿಂದೆಯೇ ಈ ಸಮಾಧಿಯನ್ನು ನಿರ್ಮಾಣ ಮಾಡಿದ್ದು, ಅದಕ್ಕೆ ಮರಳಿ ಮಣ್ಣಿಗೆ ಎಂದು ಹೆಸರಿಟ್ಟಿದ್ದಾರೆ. ಏಕೆ ಈ ಸಮಾಧಿ ಎಂದರೆ, ಜೀವನದಲ್ಲಿ ಜಿಗುಪ್ಸೆ ಎನ್ನುತ್ತಾರೆ.
ಯಾರೊಬ್ಬರ ಬಳಿಯೂ ಹಣ ಪಡೆಯದೆ ತಾವೇ ದುಡಿದು ಸಮಾಧಿ ನಿರ್ಮಾಣ ಮಾಡಿಕೊಂಡಿದ್ದಾರೆ. ತಾನು ಸತ್ತರೆ ಇದೇ ಸಮಾಧಿಯಲ್ಲಿ ಹೂಳುವಂತೆ ತಮ್ಮ ಮಕ್ಕಳಿಗೆ ಹೇಳಿದ್ದಾರೆ.ಇದೇ ಸಮಾಧಿ ಮುಂದೆ ಪುಟ್ಟ ದೇವಾಲಯವನ್ನೂ ನಿರ್ಮಾಣ ಮಾಡಿ ಬರುವವರಿಗೆ ವಿಶ್ರಾಂತಿ ಪಡೆಯಲು ತಂಗುದಾಣ ಮಾಡಿದ್ದಾರೆ. ಮರಳಿ ಮಣ್ಣಿಗೆ ಸೇರುವ ಜ್ಞಾನೋದಯ ಇಲ್ಲಿ ಸದಾ ಜಾಗೃತವಾಗುತ್ತದೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…