ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197 ಗ್ರಾಮಗಳನ್ನು ಗುರುತಿಸಲಾಗಿದ್ದು, ಸಮಸ್ಯೆ ಪರಿಹಾರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ದಾವಣಗೆರೆ ತಾಲೂಕಿನಲ್ಲಿ 73, ಹರಿಹರ-27, ಚನ್ನಗಿರಿ-11, ಹೊನ್ನಾಳಿ-29, ನ್ಯಾಮತಿ-18 ಮತ್ತು ಜಗಳೂರು ತಾಲೂಕಿನಲ್ಲಿ 38 ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಿ ಪಟ್ಟಿ ಮಾಡಲಾಗಿದೆ ಎಂದರು. ಬಾಡಿಗೆ ಆಧಾರದ ಮೇಲೆ 126 ಖಾಸಗಿ ಕೊಳವೆಬಾವಿಗಳನ್ನು ಗುರುತಿಸಲಾಗಿದ್ದು, 15 ನೇ ಹಣಕಾಸು ಸೇರಿದಂತೆ ವಿವಿಧ ಯೋಜನೆಯ ಅನುದಾನ ಬಳಕೆ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…