ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197 ಗ್ರಾಮಗಳನ್ನು ಗುರುತಿಸಲಾಗಿದ್ದು, ಸಮಸ್ಯೆ ಪರಿಹಾರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ದಾವಣಗೆರೆ ತಾಲೂಕಿನಲ್ಲಿ 73, ಹರಿಹರ-27, ಚನ್ನಗಿರಿ-11, ಹೊನ್ನಾಳಿ-29, ನ್ಯಾಮತಿ-18 ಮತ್ತು ಜಗಳೂರು ತಾಲೂಕಿನಲ್ಲಿ 38 ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಿ ಪಟ್ಟಿ ಮಾಡಲಾಗಿದೆ ಎಂದರು. ಬಾಡಿಗೆ ಆಧಾರದ ಮೇಲೆ 126 ಖಾಸಗಿ ಕೊಳವೆಬಾವಿಗಳನ್ನು ಗುರುತಿಸಲಾಗಿದ್ದು, 15 ನೇ ಹಣಕಾಸು ಸೇರಿದಂತೆ ವಿವಿಧ ಯೋಜನೆಯ ಅನುದಾನ ಬಳಕೆ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…
ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…
ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…